ಎಚ್.ವಿಶ್ವನಾಥ್ 
ರಾಜಕೀಯ

'ಸೋತಿದ್ದರೂ ಎಂಟಿಬಿಗೆ ಟಿಕೆಟ್ ನೀಡಲಾಗಿದೆ, ಎಲ್ಲಾ ಶಾಸಕರನ್ನೂ ಒಗ್ಗೂಡಿಸಿದ ವಿಶ್ವನಾಥ್ ಗೆ ಏಕಿಲ್ಲ?'

ಎಚ್. ವಿಶ್ವನಾಥ್‌ಗೆ ವಿಧಾನ ಪರಿಷತ್ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು ಏಕೆ  ಎಂಬುದು ನನಗೆ ಗೊತ್ತಾಗುತ್ತಿಲ್ಲ ಎಂದು ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್‌ ಹೇಳಿದ್ದಾರೆ. 

ಮೈಸೂರು: ಎಚ್. ವಿಶ್ವನಾಥ್‌ಗೆ ವಿಧಾನ ಪರಿಷತ್ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು ಏಕೆ  ಎಂಬುದು ನನಗೆ ಗೊತ್ತಾಗುತ್ತಿಲ್ಲ ಎಂದು ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್‌ ಹೇಳಿದ್ದಾರೆ. 

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೋರ್ ಕಮಿಟಿಯಲ್ಲಿ ವಿಶ್ವನಾಥ್ ಅವರ ಹೆಸರು ಅಂತಿಮವಾಗಿತ್ತು. ಆ ಲಿಸ್ಟ್‌ನಲ್ಲಿ ನಾಲ್ಕನೇ ಅಭ್ಯರ್ಥಿ ಹೆಸರು ಫೈನಲ್ ಆಗಿರಲಿಲ್ಲ. ನಮ್ಮ ರಾಜ್ಯದಿಂದ ಯಾವುದೇ ಪಟ್ಟಿ ಕಳುಹಿಸಿದ್ದರೂ ಸರಿಯೇ ರಾಷ್ಟ್ರೀಯ ಪಕ್ಷದಲ್ಲಿ ವರಿಷ್ಠರು ತೀರ್ಮಾನ ಮಾಡುತ್ತಾರೆ. ಹೀಗಾಗಿ ಯಾಕಾಗಿ ಅವರಿಗೆ
ಟಿಕೆಟ್ ತಪ್ಪಿದೆ ಎಂಬುದು ಗೊತ್ತಿಲ್ಲ ಎಂದು ಶ್ರೀನಿವಾಸ ಪ್ರಸಾದ್ ಹೇಳಿದರು.

ಹೆಚ್​.ವಿಶ್ವನಾಥ್​ ಫೋನ್ ಮಾಡಿ ಮಾತನಾಡಿದ್ದರು. ಮುಂದೆ ಏನು ಮಾಡಬೇಕು ಎಂಬುದನ್ನು ನೋಡಬೇಕು. ಈ ಬಗ್ಗೆ ಯಡಿಯೂರಪ್ಪ ಜೊತೆ ಸಹ ಚರ್ಚೆ ಮಾಡುತ್ತೇವೆ. ವಿಶ್ವನಾಥ್ ಜೆಡಿಎಸ್​ ಸೇರುವ ಮುನ್ನ ಏನು ಆಗಿರಲಿಲ್ಲ. ಈಗಾಲೂ ಅವರು ಹತಾಶೆ ಪಡಬೇಕಾಗಿಲ್ಲ. ಅವರ ಆರೋಗ್ಯ ತುಂಬಾ ಚೆನ್ನಾಗಿದೆ. ಮುಂದೆ ಎಲ್ಲವೂ ಸರಿಯಾಗಲಿದೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಅವರು ತಿಳಿಸಿದರು.

ಈ ಹಿಂದೆ ಉಪಚುನಾವಣೆಯಲ್ಲಿ ಎಂಟಿಬಿ ನಾಗರಾಜ್ ಸಹ ಸೋತಿದ್ದರು. ಅವರಿಗೆ ಟಿಕೆಟ್ ನೀಡಲಾಗಿದೆ. ಈ ಕಾರಣದಿಂದ ಹೆಚ್.ವಿಶ್ವನಾಥ್ ಅವರಿಗೂ ನೀಡಬೇಕಿತ್ತು. ಜೊತೆಗೆ ಅಂದು ಎಲ್ಲಾ ಶಾಸಕರನ್ನು ಒಗ್ಗೂಡಿಸಿದ್ದು ವಿಶ್ವನಾಥ್ ಅವರೇ ಎಂಬುದು ನಮಗೆ ಗೊತ್ತಿದೆ ಎಂದು ಶ್ರೀನಿವಾಸ ಪ್ರಸಾದ್‌ ನೆನಪಿಸಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT