ವಿಶ್ವನಾಥ್ ಯೋಗೇಶ್ವರ್ ಮತ್ತು ಸುರಾನಾ 
ರಾಜಕೀಯ

ನಾಮ ನಿರ್ದೇಶನಕ್ಕಾದರೂ ಪರಿಗಣಿಸಿ: ದುಂಬಾಲು ಬಿದ್ದ ವಿಶ್ವನಾಥ್, ಸುರಾನಾ, ಯೋಗೇಶ್ವರ್!

ಶಾಸನಸಭೆಯಿಂದ ವಿಧಾನ ಪರಿಷತ್ ಆಯ್ಕೆ ಚುನಾವಣೆ ಮುಗಿದಿದ್ದು, ನಾಮ ನಿರ್ದೇಶಿತ ಸದಸ್ಯರ ಆಯ್ಕೆ ಬಾಕಿ ಉಳಿದಿದೆ, ಈ ತಿಂಗಳ ಅಂತ್ಯದಲ್ಲಿ ನಾಮ ನಿರ್ದೇಶಿತ ಸದಸ್ಯರ ಅಧಿಕಾರವಧಿ ಪೂರ್ಣಗೊಳ್ಳಲಿದೆ.

ಬೆಂಗಳೂರು: ಶಾಸನಸಭೆಯಿಂದ ವಿಧಾನ ಪರಿಷತ್ ಆಯ್ಕೆ ಚುನಾವಣೆ ಮುಗಿದಿದ್ದು, ನಾಮ ನಿರ್ದೇಶಿತ ಸದಸ್ಯರ ಆಯ್ಕೆ ಬಾಕಿ ಉಳಿದಿದೆ, ಈ ತಿಂಗಳ ಅಂತ್ಯದಲ್ಲಿ ನಾಮ ನಿರ್ದೇಶಿತ ಸದಸ್ಯರ ಅಧಿಕಾರವಧಿ ಪೂರ್ಣಗೊಳ್ಳಲಿದೆ.

ತಮ್ಮನ್ನು ಪರಿಷತ್ ಗೆ ನಾಮ ನಿರ್ದೇಶನ ಮಾಡುವಂತೆ ಎಚ್ ವಿಶ್ವನಾಥ್ ಸಿಎಂ ಯಡಿೂರಪ್ಪ ಅವರಿಗೆ ಒತ್ತಡ ಹಾಕುತ್ತಿದ್ದಾರೆ. ಮೊದಲ ಆಯ್ಕೆ ಪಟ್ಟಿಯ ನಾಲ್ಕು ಮಂದಿಯಲ್ಲಿ ತಮ್ಮ ಹೆಸರು   ಇರಲಿದೆ ಎಂದು ಎಚ್ ವಿಶ್ವನಾಥ್ ಹೇಳಿದ್ದಾರೆ.

ರಾಜ್ಯ ಬಿಜೆಪಿ  ಉಪಾಧ್ಯಕ್ಷ ಮಾಜಿ ಶಾಸಕ ನಿರ್ಮಲ್ ಕುಮಾರ್ ಸುರಾನಾ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದು,  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗಿಂತ ಹೆಚ್ಚು ಸಕ್ರಿಯವಾಗಿದ್ದು ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ಜೊತೆಗೆ ಮಾಜಿ ಎಂಎಲ್ ಸಿ ಗೋ ಮಧುಸೂದನ್ ಕೂಡ ಪರಿಷತ್ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

ರವಿ ಕುಮಾರ್‌ರನ್ನು ಹೆಚ್ಚಾಗಿ ಅವಲಂಬಿಸಿದ್ದು ಪರಿಷತ್ತಿನಲ್ಲಿ ಅವರು ಪಕ್ಷವನ್ನು ಉತ್ತಮವಾಗಿ ಸಮರ್ಥಿಸಿಕೊಳ್ಳಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಆದರೆ ಮಧುಸೂದನ್ ಯಡಿಯೂರಪ್ಪ ವಿರೋಧಿ ಗುಂಪಿನಲ್ಲಿ ಸೇರಿಕೊಂಡಿರುವುದರಿಂದ ಅವರ ಆಯ್ಕೆ ಕಷ್ಟವಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನು ಇವರ ಜೊತೆಗೆ ಒಕ್ಕಲಿಗರ ಪ್ರಬಲ ನಾಯಕ ಸಿಪಿ ಯೋಗೇಶ್ವರ್ ಕೂಡ ಎಂಎಲ್ ಸಿ ಸ್ಥಾನದ ಆಕಾಂಕ್ಷಿಯಾಗಿದ್ದಾರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು, ಅದಾದ ನಂತರ ಅವರು ಕೂಡ ಮಹಾತ್ವಾಕಾಂಕ್ಷಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT