ಸಂಗ್ರಹ ಚಿತ್ರ 
ರಾಜಕೀಯ

ಬೇಡಾ ಎಂದರೂ ಉಪ ಚುನಾವಣೆಗೆ ನಿಂತು ಹೆಚ್ ವಿಶ್ವನಾಥ್ ಸೋತರು: ಭೈರತಿ ಬಸವರಾಜು ಬೇಸರ

ಬೇಡಾ ಎಂದರೂ ಉಪ ಚುನಾವಣೆಗೆ ನಿಂತು ಹೆಚ್ ವಿಶ್ವನಾಥ್ ಸೋತರು ಎಂದು ಸಚಿವ ಬೈರತಿ ಬಸವರಾಜು ಬೇಸರ ವ್ಯಕ್ತಪಡಿಸಿದ್ದಾರೆ.

ಕಲಬುರಗಿ: ಬೇಡಾ ಎಂದರೂ ಉಪ ಚುನಾವಣೆಗೆ ನಿಂತು ಹೆಚ್ ವಿಶ್ವನಾಥ್ ಸೋತರು ಎಂದು ಸಚಿವ ಬೈರತಿ ಬಸವರಾಜು ಬೇಸರ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ಬುಧುವಾರ ನಗರದ ಪ್ರದಕ್ಷಿಣೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ವಿಶ್ವನಾಥ್ ಅವರಿಗೆ ಉಪ ಚುನಾವಣೆಗೆ ನಿಲ್ಲಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮನವಿ ಮಾಡಿದ್ದರು. ಆದರೆ, ಅವರ ಮಾತು ಕೇಳಿದೆ ಚುನಾವಣೆಯಲ್ಲಿ ನಿಂತು ವಿಶ್ವನಾಥ ಸೋತರು ಎಂದು ಬೇಸರ ವ್ಯಕ್ತಪಡಿಸಿದರು.

'ಯಡಿಯೂರಪ್ಪನವರೇ ಖುದ್ದಾಗಿ ಚುನಾವಣೆಗೆ ನೀವು (ವಿಶ್ವನಾಥ) ನಿಲ್ಲುವುದು ಬೇಡ. ನಿಮ್ಮನ್ನು ವಿಧಾನ ಪರಿಷತ್ತಿಗೆ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದ್ದರು. ಆದರೂ, ವಿಶ್ವನಾಥ್ ಚುನಾವಣೆಗೆ ಸ್ಪರ್ಧಿಸಿದರು. ಅದೇ ಕಾರಣಕ್ಕೆ ಈಗ ವಿಧಾನ ಪರಿಷತ್ ಸ್ಥಾನವೂ ಸಿಗಲಿಲ್ಲ. ಆದರೆ ಈಗಲೂ ಕಾಲ ಮಿಂಚಿಲ್ಲ. ವಿಶ್ವನಾಥ್ ಅವರಿಗೆ ಸ್ಥಾನ-ಮಾನ ಸಿಗುವ ಭರವಸೆ ಇದೆ. ಅವರ ವಿಷಯದಲ್ಲಿ ಪಕ್ಷದ ಹೈಕಮಾಂಡ್ ಉತ್ತಮ ನಿರ್ಧಾರ ತೆಗೆದುಕೊಳ್ಳುತ್ತದೆ. ಎಂದು ಭೈರತಿ ಬಸವರಾಜ್ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ನೂತನ ವಿಧಾನ ಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ನೀಡೋ ವಿಚಾರದ ಕುರಿತು ಪ್ರತಿಕ್ರಿಯಿಸಿದ ಭೈರತಿ, ಯಾರಿಗೆ ಸಚಿವ ಸ್ಥಾನ ಕೊಡಬೇಕೆನ್ನೋದು ಸಿಎಂ ವಿವೇಚನೆಗೆ ಬಿಟ್ಟ ವಿಚಾರ. ಅವರು ಯಾರಿಗೆ ಸಚಿವ ಸ್ಥಾನ ಕೊಟ್ಟರೂ ನಾವೆಲ್ಲಾ ಅದನ್ನು ಒಪ್ಪಿಕೊಳ್ಳುತ್ತೇವೆ ಎಂದರು.

ಅಂತೆಯೇ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ವಿಷಯವಾಗಿ ಮುಖ್ಯಮಂತ್ರಿಗಳು ತೀರ್ಮಾನಿಸುತ್ತಾರೆ. ನಾಳೆ (ಗುರುವಾರ) ಸಚಿವ ಸಂಪುಟ ಸಭೆಯಲ್ಲಿ ನಡೆಯಲಿದ್ದು, ಸಭೆಯಲ್ಲಿ ಚರ್ಚಿಸಿ ಲಾಕ್ ಡೌನ್ ಬಗ್ಗೆ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ‌‌ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT