ದೇವೇಗೌಡ 
ರಾಜಕೀಯ

ಮುಖ್ಯಮಂತ್ರಿ ಮನೆ ಮುಂದಿನ ಧರಣಿ ಹಿಂಪಡೆದ ಹೆಚ್.ಡಿ.ದೇವೇಗೌಡ

ಮಂಡ್ಯ ಜಿಲ್ಲೆಯಲ್ಲಿ ದುರುದ್ದೇಶದ ರಾಜಕಾರಣ ವಿರುದ್ಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿವಾಸದ ಮುಂದೆ ನಡೆಸಲುದ್ದೇಶಿಸಿದ್ದ ಧರಣಿಯನ್ನು ಮಾಜಿ ಪ್ರಧಾನಿ, ರಾಜ್ಯಸಭಾ ಜೆಡಿಎಸ್ ಸದಸ್ಯ ಎಚ್.ಡಿ.ದೇವೇಗೌಡ ಹಿಂಪಡೆದಿದ್ದಾರೆ.

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ದುರುದ್ದೇಶದ ರಾಜಕಾರಣ ವಿರುದ್ಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿವಾಸದ ಮುಂದೆ ನಡೆಸಲುದ್ದೇಶಿಸಿದ್ದ ಧರಣಿಯನ್ನು ಮಾಜಿ ಪ್ರಧಾನಿ, ರಾಜ್ಯಸಭಾ ಜೆಡಿಎಸ್ ಸದಸ್ಯ ಎಚ್.ಡಿ.ದೇವೇಗೌಡ ಹಿಂಪಡೆದಿದ್ದಾರೆ.

ಯಡಿಯೂರಪ್ಪ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರು ಮಂಡ್ಯ ಜಿಲ್ಲೆಯ ರಾಜಕೀಯ ವಿದ್ಯಮಾನಗಳ ಕುರಿತ ನಮ್ಮ ಬೇಡಿಕೆಗಳನ್ನು ಭಾಗಶಃ ಒಪ್ಪಿರುತ್ತಾರೆ. ಆದ್ದರಿಂದ ಜೂನ್ 29ರಂದು ಮುಖ್ಯಮಂತ್ರಿಗಳ ನಿವಾಸದ ಮುಂದೆ ನಡೆಯಬೇಕಾಗಿದ್ದ ಧರಣಿಯನ್ನು ಹಿಂಪಡೆದಿರುವುದಾಗಿ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ಕೆ.ಆರ್.ಪೇಟೆ ಕ್ಷೇತ್ರದ ಕ್ರಷರ್ ಮಾಲೀಕ ಜೆಡಿಎಸ್ ಕಾರ್ಯಕರ್ತ ಎಚ್.ಟಿ. ಮಂಜುಗೆ ಸಕ್ರಮವಾಗಿ ಅನುಮತಿ ಪಡೆದಿದ್ದರೂ ಕ್ರಷರ್ ನಿಲ್ಲಿಸುವಂತೆ ಅಧಿಕಾರಿಗಳ ಮೂಲಕ‌ ಮಂಡ್ಯ ಉಸ್ತುವಾರಿ ಸಚಿವ ಕಿರುಕುಳ ನೀಡುವ ಮೂಲಕ ನಾರಾಯಣ ಗೌಡರು ರಾಜಕೀಯ ದ್ವೇಷ ಸಾಧಿಸುತ್ತಿದ್ದಾರೆ. ಮಂಜು ಅವರು ಕ್ರಷರ್ ನಿಲ್ಲಿಸಿದ್ದಾರೆ‌. ಸಕ್ರಮವಾಗಿರುವ ಅವರ ಕ್ರಷರ್​ಗೆ ಅನುಮತಿ ಕೊಡಿಸುವಂತೆಯೂ ಇಲ್ಲದಿದ್ದರೆ ಮುಖ್ಯಮಂತ್ರಿಗಳ ನಿವಾಸದ ಮುಂದೆ ಜೂ.29ರಂದು ಧರಣಿ ನಡೆಸುವುದಾಗಿ ಯಡಿಯೂರಪ್ಪಗೆ ಪತ್ರ ಬರೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

ಭಾರತ-ಅಮೆರಿಕ ಸಂಬಂಧಗಳಿಗೆ ಹೊಸ ವೇಗ: ಪ್ರಧಾನಿ ಮೋದಿಗೆ ವ್ಯಾನ್ಸ್ ಕರೆ

KBC ವೇದಿಕೆಯಲ್ಲಿ ಆಮಿರ್ ಖಾನ್‌; ‘4ನೇ ಮದುವೆ ಯಾವಾಗ?’; ಕಾಲೆಳೆದ ನೆಟ್ಟಿಗರು, Amitabh bachchan ಶೋ Promoಗೆ ಕಮೆಂಟ್‌ಗಳ ಮಹಾಪೂರ..!

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ