ಮೂಲ, ವಲಸಿಗ ಸಚಿವರು 
ರಾಜಕೀಯ

ಜಿಲ್ಲಾ ಉಸ್ತುವಾರಿಗೆ ಬಿಜೆಪಿಯಲ್ಲಿ ಮೂಲ ವಲಸಿಗರ ನಡುವೆ ಸಂಘರ್ಷ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ವಲಸಿಗರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ತಿಂಗಳು ತುಂಬುತ್ತಿದೆ. ಆದರೆ ಈವರೆಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ದೊರೆತಿಲ್ಲ. ಸ್ವಂತ ಜಿಲ್ಲೆಗಳಲ್ಲಿಯೇ ಉಸ್ತುವಾರಿ ಜವಾಬ್ದಾರಿ ಇಲ್ಲದ ಅನಿಶ್ಚಿತತೆಗೆ ಸಿಲುಕಿದ್ದಾರೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ವಲಸಿಗರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ತಿಂಗಳು ತುಂಬುತ್ತಿದೆ. ಆದರೆ ಈವರೆಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ದೊರೆತಿಲ್ಲ. ಸ್ವಂತ ಜಿಲ್ಲೆಗಳಲ್ಲಿಯೇ ಉಸ್ತುವಾರಿ ಜವಾಬ್ದಾರಿ ಇಲ್ಲದ ಅನಿಶ್ಚಿತತೆಗೆ ಸಿಲುಕಿದ್ದಾರೆ

ಯಡಿಯೂರಪ್ಪ ಅವರ ಸಂಪುಟ ವಿಸ್ತರಣೆಗೂ ಮುನ್ನ ಸಂಪುಟದಲ್ಲಿದ್ದ 17 ಜನ ಸಚಿವರ ಪೈಕಿ  12 ಜನ ಸಚಿವರಿಗೆ ಎರಡು ಜಿಲ್ಲೆಗಳ ಉಸ್ತವಾರಿ ವಹಿಸಲಾಗಿದೆ.

ಎರಡು ಜಿಲ್ಲೆಗಳ ಉಸ್ತುವಾರಿ ವಹಿಸಿಕೊಂಡಿರುವ ಬಹುತೇಕ ಸಚಿವರು ಪ್ರಭಾವಿಗಳಾಗಿದ್ದು, ಅವರಿಂದ ಯಾವ ಜಿಲ್ಲೆಯನ್ನು ವಾಪಸ್ ಪಡೆಯಬೇಕೆಂಬ ಗೊಂದಲ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಮೊದಲಿನಿಂದಲೂ ಸಂಪುಟದಲ್ಲಿರುವ ಸಚಿವರು ತಮಗೆ ಬೇರೆ ಜಿಲ್ಲೆಯ ಉಸ್ತುವಾರಿ ನೀಡುವಂತೆಯೂ ಮುಖ್ಯಮಂತ್ರಿ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಮಾಹಿತಿ‌ ಇದೆ.

ಉಪ ಮುಖ್ಯಮಂತ್ರಿಗಳಾದ ಡಾ. ಅಶ್ವತ್ಥ್ ನಾರಾಯಣ, ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಜಗದೀಶ್ ಶೆಟ್ಟರ್, ಆರ್. ಅಶೋಕ್,  ಬಸವರಾಜ್ ಬೊಮ್ಮಾಯಿ, ಜೆ.ಸಿ. ಮಾಧುಸ್ವಾಮಿ, ಸಿ.ಸಿ. ಪಾಟೀಲ, ವಿ. ಸೋಮಣ್ಣ, ಬಿ. ಶ್ರೀರಾಮುಲು ಹಾಗೂ ಪ್ರಭು ಚೌಹ್ವಾಣ್ ಅವರಿಗೆ ಎರಡೆರಡು ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದೆ.

ಪ್ರಮುಖವಾಗಿ ಕೆಲವು ಸಚಿವರು ತಮ್ಮ ತವರು ಜಿಲ್ಲೆಯೊಂದಿಗೆ ಹೆಚ್ಚುವರಿಯಾಗಿ ಮತ್ತೊಂದು ಜಿಲ್ಲೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT