ಬಸನಗೌಡ ಯತ್ನಾಳ್-ದೊರೆಸ್ವಾಮಿ 
ರಾಜಕೀಯ

ದೊರೆಸ್ವಾಮಿ ಬಗ್ಗೆ ಹೇಳಿಕೆ: ಏನೇ ಆದರೂ ಕ್ಷಮೆ ಕೇಳುವುದಿಲ್ಲ: ಬಸನಗೌಡ ಪಾಟೀಲ್ ಯತ್ನಾಳ್

ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್. ದೊರೆಸ್ವಾಮಿ ಬಗ್ಗೆ ತಾವು ನೀಡಿರುವ  ಹೇಳಿಕೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದೂ ಇಲ್ಲ. ಅವರಲ್ಲಿ ಕ್ಷಮೆ ಕೇಳುವ  ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್. ದೊರೆಸ್ವಾಮಿ ಬಗ್ಗೆ ತಾವು ನೀಡಿರುವ  ಹೇಳಿಕೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದೂ ಇಲ್ಲ. ಅವರಲ್ಲಿ ಕ್ಷಮೆ ಕೇಳುವ  ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊರೆಸ್ವಾಮಿ ಹೋರಾಟದ ಬಗ್ಗೆ ತನಿಖೆಯಾಗಲಿ. ಅವರು  ಬ್ರಿಟಿಷ್ ಲಾಠಿಯ ಬೂಟಿನ ಏಟು ತಿಂದಿದ್ದಾರೆಯೇ? ಕಾಲಾಪಾನಿ ಶಿಕ್ಷೆ ಎಷ್ಟು ಬಾರಿ  ಅನುಭವಿಸಿದ್ದಾರೆ ? ಎಷ್ಟು ಸಲ ದೊರೆಸ್ವಾಮಿ ಜೈಲಿಗೆ ಹೋಗಿ ಬಂದಿದ್ದಾರೆ ಎಂದು  ಪ್ರಶ್ನಿಸಿದರು.

ಕಾಂಗ್ರೆಸ್ ಗೆ ಮಾಡಲು ಬೇರೆ ಕೆಲಸವಿಲ್ಲ. ಹೀಗಾಗಿ ತಮ್ಮ  ವಿರುದ್ಧ ಹೋರಾಟ ಮಾಡುತ್ತಿದೆ. ತಾವೇ ಸ್ವಂತಿಕೆಯಿಂದ ದೊರೆಸ್ವಾಮಿ ಬಗ್ಗೆ ಹೇಳಿಕೆ  ನೀಡಿದ್ದೇನೆಯೇ ಹೊರತು ಆರ್ ಎಸ್ಎಸ್ ತಮ್ಮಿಂದ ಹೇಳಿಸಿಲ್ಲ ಎಂದರು.

ಹುಟ್ಟ  ಹಿಂದೂವಾಗಿರುವ ತಾವು, ಹಿಂದೂಪರ ಮಾತನಾಡಿದ್ದೇನೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ  ಕೊಡುತ್ತೇನೆಯೇ ಹೊರತು ನಕಲಿ ಹೋರಾಟಗಾರರಿಗೆ ಗೌರವ ಕೊಡುವುದಿಲ್ಲ ಎಂದು ಮತ್ತೆ  ಹೇಳಿದರು.

ವಿಪಕ್ಷ ಸ್ಥಾನದಲ್ಲಿರುವ ಜೆಡಿಎಸ್ ಹೀಗೆಯೇ ಮಾಡುತ್ತಾ ಹೋದರೆ ಮುಂದೊಂದು ದಿನ ಶೂನ್ಯವಾಗುತ್ತದೆ ಎಂದು ಯತ್ನಾಳ್ ಭವಿಷ್ಯ ನುಡಿದರು. ನಾನು ಗಾಂಧಿ, ನಾನು‌ ದೊರೆಸ್ವಾಮಿ ಅಭಿಯಾನ ವಿಚಾರವಾಗಿ ಪ್ರತಿಕ್ರಿಯಿಸಿದ ಯತ್ನಾಳ್, ನಾನು ಸಾವರ್ಕರ್, ನಾನು ಸುಭಾಷ್ ಚಂದ್ರ ಬೋಸ್, ನಾನು ಭಗತ್ ಸಿಂಗ್. ಇವರನ್ನು ಬಿಟ್ಟು ಆ ಕಳ್ಳರ ಕತೆ ನನಗೇಕೆ? ಎಂದು ಯತ್ನಾಳ್  ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT