ವಿಧಾನಸಭೆ 
ರಾಜಕೀಯ

ಉಭಯ ಸದನಗಳಲ್ಲಿ ಯತ್ನಾಳ್ ವಿರುದ್ಧ ಆಕ್ರೋಶ, ಗದ್ದಲ, ಪ್ರತಿಭಟನೆ: ದಿನದ ಕಲಾಪ ಬಲಿ

ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ‌ ವಿರುದ್ಧ ಆಡಿದ ಮಾತಿನ ಕಿಡಿ, ಅದನ್ನು ಸಮರ್ಥಿಸಿಕೊಂಡ ಬಿಜೆಪಿ ಸಚಿವರ ಹೇಳಿಕೆಗಳು ಇಂದು ಉಭಯ ಸದನಗಳಲ್ಲಿ ಪ್ರತಿಧ್ವನಿಸಿ  ಇಡೀ ದಿನದ ಕಲಾಪವನ್ನು ನುಂಗಿಹಾಕಿತು.

ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ‌ ವಿರುದ್ಧ ಆಡಿದ ಮಾತಿನ ಕಿಡಿ, ಅದನ್ನು ಸಮರ್ಥಿಸಿಕೊಂಡ ಬಿಜೆಪಿ ಸಚಿವರ ಹೇಳಿಕೆಗಳು ಇಂದು ಉಭಯ ಸದನಗಳಲ್ಲಿ ಪ್ರತಿಧ್ವನಿಸಿ  ಇಡೀ ದಿನದ ಕಲಾಪವನ್ನು ನುಂಗಿಹಾಕಿತು.

ಬೆಳಿಗ್ಗೆಯಿಂದ ಸಂಜೆವರೆಗೆ ವಿಧಾನಸಭೆ ಗೊಂದಲದ ಗೂಡಾಗಿತ್ತು. ಆರೋಪ ಪ್ರತ್ಯಾರೋಪ ಸದನದಲ್ಲಿ ಪರಾಕಾಷ್ಠೆಯ ತುತ್ತತುದಿಗೆ ಮುಟ್ಟಿತ್ತು ಇಡೀ ದಿನದ  ಕಲಾಪ ಕೇವಲ ಘೋಷಣೆ, ಪ್ರತಿಭಟನೆ ಗದ್ದಲದ ನಡುವೆಯೇ ಆರಂಭವಾಗಿ ಗದ್ದಲದಲ್ಲೇ ಮುಕ್ತಾಯವಾಯಿತು.

ಗದ್ದಲದ ನಡುವೆ ಒಂದು ಹಂತದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ವಿಚಾರದ ಬಗ್ಗೆ ಚರ್ಚೆ ಮಾಡಲು ಯಾವುದೇ ಅಭ್ಯಂತರ ಇಲ್ಲ. ಪ್ರತಿಪಕ್ಷ ಮುಖಂಡರು ನೊಟೀಸ್ ನೀಡಿ ಚರ್ಚೆಗೆ ಸಿದ್ಧರಾಗಲಿ. ಸರ್ಕಾರ ಇದಕ್ಕೆ ತಕ್ಕ ಮತ್ತು ಸೂಕ್ತ ಉತ್ತರ ಕೊಡಲಿದೆ ಎಂದರು. ನೊಟೀಸ್ ಕೊಡದೆ ಕಾಲಹರಣ ಮಾಡುವುದು ವಿರೋಧಪಕ್ಷಕ್ಕೂ ಶೋಭೆ ತರುವುದಿಲ್ಲ. ಹಾಗೂ ಆಡಳಿತ ಪಕ್ಷಕ್ಕೂ ಶೋಭೆ ಬರುವುದಿಲ್ಲ. ಈ ವಿಷಯ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಿದೆ ಎಂದರು. 

ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಪರಸ್ಪರ ದಿಕ್ಕಾರ, ದಿಕ್ಕಾರ ಎಂಬ ಘೋಷಣೆಗಳನ್ನು ಕೂಗುತ್ತಲೇ ಇದ್ದರು, ಪರಿಣಾಮ ಕಲಾಪ ನಡೆಸಲು ಸಾಧ್ಯವಾಗದೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಗದ್ದಲದ ನಡುವೆಯೇ ವಿಧಾನಸಭೆಯ ಕಲಾಪವನ್ನು ನಾಳೆಗೆ ಮುಂದೂಡಿದರು.

ಮತ್ತೊಂದೆಡೆ ವಿಧಾನಪರಿಷತ್ತಿನಲ್ಲಿಯೂ ಈ  ವಿಚಾರ ಪ್ರತಿಧ್ವನಿಸಿ  ಇಡೀ ದಿನದ ಕಲಾಪವನ್ನು ಮುಂದೂಡಿದ ಪ್ರಸಂಗ ನಡೆಯಿತು‌.ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು  ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜೀನಾಮೆಗೆ ಪಟ್ಟು ಹಿಡಿದು ಪ್ರತಿಭಟನೆ ಮುಂದುವರಿಸಿದರು. ಸದನದ ಬಾವಿಯಿಂದ ತಮ್ಮ ಆಸನಕ್ಕೆ ಬರಲು ಸದಸ್ಯರೆಲ್ಲ ನಿರಾಕರಿಸಿದ ಹಿನ್ನೆಲೆಯಲ್ಲಿ ಕಲಾಪವನ್ನು ಮಂಗಳವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಯಿತು. 

ಬಸನಗೌಡ ಪಾಟೀಲ್ ಯತ್ನಾಳ್ ಶಾಸಕ ಸ್ಥಾನ ರದ್ದುಗೊಳಿಸುವಂತೆ ಒತ್ತಾಯಿಸಿ ಬೆಳಗಿನಿಂದಲೂ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಇಂದು ದಿನದ ಕಲಾಪ ನಡೆಯಲು ಅವಕಾಶ ಮಾಡಿಕೊಡಲಿಲ್ಲ. ಗದ್ದಲದ ಗೂಡಾಗಿದ್ದ ಪರಿಷತ್ ಕಲಾಪವನ್ನು ಸಭಾಪತಿಗಳು ಮೂರು ಸಾರಿ ಮುಂದೂಡಿದರು.ಕೊನೆಗೂ ಪ್ರತಿಪಕ್ಷದ ಸದಸ್ಯರ ಮನವೊಲಿಸುವಲ್ಲಿ ಸಫಲವಾಗದ ಹಿನ್ನೆಲೆ ಕಲಾಪವನ್ನು ನಾಳೆಗೆ ಮುಂದೂಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

SCROLL FOR NEXT