ಸ್ಪೀಕರ್, ಯತ್ನಾಳ್ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು 
ರಾಜಕೀಯ

ಸ್ಪೀಕರ್, ಯತ್ನಾಳ್ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಅವರನ್ನು ಪಾಕಿಸ್ತಾನದ ಏಜೆಂಟ್ ಎಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ನಿರ್ದೇಶನ ನೀಡುವಂತ ಕೋರಿ ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಕಾಂಗ್ರೆಸ್ ಪಕ್ಷ ದೂರು ನೀಡಿದೆ. 

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಅವರನ್ನು ಪಾಕಿಸ್ತಾನದ ಏಜೆಂಟ್ ಎಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ನಿರ್ದೇಶನ ನೀಡುವಂತ ಕೋರಿ ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಕಾಂಗ್ರೆಸ್ ಪಕ್ಷ ದೂರು ನೀಡಿದೆ. 

ದೂರು ನೀಡಿದ ಬಳಿಕ ವಿಧಾನಸಬೆಗೆ ತೆರೆಳಿದ ಕಾಂಗ್ರೆಸ್ ನಾಯಕರು, ಕಳೆದ ಎರಡು ದಿನಗಳಿಂದ ನಡೆಸಿದ್ದ ಧರಣಿಯನ್ನು ಕೈಬಿಟ್ಟು ಕಲಾಪದಲ್ಲಿ ಪಾಲ್ಗೊಂಡರು. 

ಬಸನಗೌಡ ಪಾಟೀಲ್ ಯತ್ನಾಳ್ ಅವರ ಸದಸ್ಯತ್ವ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಸೋಮವಾರ ಹಾಗೂ ಮಂಗಳವಾರ ಸದನದ ಬಾವಿಗಿಳಿದು ಪ್ರತಿಭಟಿಸಿದ್ದರು. ಈಬಗ್ಗೆ ನೋಟಿಸ್ ನೀಡಿದರೂ ಚರ್ಚೆಗೆ ಸ್ಪೀಕ್ರ ಕಾಗೇರಿಯವರು ಅನುಮತಿ ನೀಡದ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ನಿಯೋಗ ಭೇಟಿ ಮಾಡಿತು. 

ಈ ವೇಳೆ ರಾಜ್ಯಪಾಲರಿಗೆ ನೀಡಿರುವ ದೂರಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡುವ ಮೂಲಕ ಯತ್ನಾಳ್ ಸಂವಿಧಾನದ ನಿಯಮ ಉಲ್ಲಂಘನೆ ಮಾಡಿದ್ದಾರೆ. 103 ವರ್ಷಗಳ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ 1942ರಲ್ಲಿ ಸೆರೆವಾಸ ಅನುಭವಿಸಿದ್ದ ಗಾಂಧೀವಾದಿಗೆ ಪಾಕಿಸ್ತಾನದ ಏಜೆಂಟ್ ಹಾಗೂ ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಯತ್ನಾಳ್ ಹೇಳಿದ್ದಾರೆ. ಈ ಬಗ್ಗೆ ಚರ್ಚೆಗೆ ಸ್ಪೀಕರ್ ಅನುಮತಿ ನೀಡಿಲ್ಲ. ಅವರಿಗೆ ಸೂಕ್ತ ಕ್ರಮಕ್ಕೆ ನಿರ್ದೇಶಿಸಬೇಕೆಂದು ಮನವಿ ಮಾಡಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!