ಎಚ್.ಡಿ ದೇವೇಗೌಡ 
ರಾಜಕೀಯ

ಮೋದಿ ಆಡಳಿತದಲ್ಲಿ ರಿಸರ್ವ್ ಬ್ಯಾಂಕ್ ಹಣಕಾಸು ಸಚಿವಾಲಯದ ಇಲಾಖೆಯಾಗಿ ಮಾರ್ಪಟ್ಟಿದೆ: ಮಾಜಿ ಪ್ರಧಾನಿ ದೇವೇಗೌಡ ವಾಗ್ದಾಳಿ

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರಿಸರ್ವ್ ಬ್ಯಾಂಕ್ ಅನ್ನು 'ಅಸ್ಥಿರಗೊಳಿಸುತ್ತಿದೆ' ದರ ಸ್ವಾಯತ್ತತೆ ಮೇಲೆ ಆಕ್ರಮಣ ನಡೆಸಿ ವ್ಯವಸ್ಥೆಯನ್ನು 'ಸಡಿಲಗೊಳಿಸಿದೆ'.ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆರೋಪಿಸಿದ್ದಾರೆ. 

ಹುಬ್ಬಳ್ಳಿ:  ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರಿಸರ್ವ್ ಬ್ಯಾಂಕ್ ಅನ್ನು 'ಅಸ್ಥಿರಗೊಳಿಸುತ್ತಿದೆ' ದರ ಸ್ವಾಯತ್ತತೆ ಮೇಲೆ ಆಕ್ರಮಣ ನಡೆಸಿ ವ್ಯವಸ್ಥೆಯನ್ನು 'ಸಡಿಲಗೊಳಿಸಿದೆ'.ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆರೋಪಿಸಿದ್ದಾರೆ.

ಯೆಸ್ ಬ್ಯಾಂಕ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಾತ್ಯಾತೀತ ಜನತಾದಳ ಮುಖ್ಯಸ್ಥ ದೇವೇಗೌಡ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

"ವಾಜಪೇಯಿ ಆರು ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿದ್ದರು, ಹತ್ತು ವರ್ಷಗಳ ಕಾಲ ಮನಮೋಹನ್ ಸಿಂಗ್ ಪ್ರಧಾನಿ, ಇನ್ನು ನರೇಂದ್ರ ಮೋದಿ ಪ್ರಧಾನಿಯಾಗಿ ಇದು ಆರನೇ ವರ್ಷ ಅವರ (ಮೋದಿಯವರ) ಅವಧಿಯಲ್ಲಿ ರಿಸರ್ವ್ ಬ್ಯಾಂಕ್ ಹಣಕಾಸು ಸಚಿವಾಲಯದ ಇಲಾಖೆಯಂತೆ ಮಾರ್ಪಟ್ಟಿದೆ. " ದೇವೇಗೌಡ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮೋದಿ ನಾಯಕತ್ವದಲ್ಲಿ ಆರ್‌ಬಿಐ ಅನ್ನು ಅಸ್ಥಿರಗೊಳಿಸಲಾಯಿತು, ಅದರ ಸ್ವಾಯತ್ತತೆಯ ಮೇಲೆ ದಾಳಿ ಮಾಡಲಾಗಿದೆ.ಹಣಕಾಸು ಸಲಹೆಗಾರರ ​​ನಿಷ್ಪಕ್ಷಪಾತ ಮತ್ತು ಪ್ರಾಮಾಣಿಕ ಸಲಹೆಯನ್ನು ಕಾರ್ಯಗತಗೊಳಿಸದೆ ನಿರ್ಲಕ್ಷಿಸಲಾಗಿದೆ. ರಿಸರ್ವ್ ಬ್ಯಾಂಕ್ ಎಲ್ಲಾ ಬ್ಯಾಂಕುಗಳಿಗೆ ನಿಯಂತ್ರಣ ಸ<ಸ್ಥೆಯಾಗಿದೆ. ಅಂತಹಾ ಸಂಸ್ಥೆಯ ವ್ಯವಸ್ಥೆಯನ್ನು ಸಡಿಲಗೊಳಿಸಲಾಗಿದೆ" ಎಂದು ಅವರು ಹೇಳಿದರು.

ನಗದು ಬಿಕ್ಕಟ್ಟಿನಲ್ಲಿರುವ ಯೆಸ್ ಬ್ಯಾಂಕಿನ ಆಡಳಿತ ಮಂಡಳಿಯನ್ನು ಪುನರಚಿಸಿರುವ ಆರ್‌ಬಿಐ ಖಾತೆದಾರರು ಬ್ಯಾಂಕಿನಲ್ಲಿ ಠೇವಣಿ ಹಿಂಪಡೆಯುವಿಕೆಯನ್ನು ಒಂದು ಖಾತೆಗೆ ಒಂದು ತಿಂಗಳಿಗೆ 50,000 ರೂ.ಗೆ ಮಿತಿಗೊಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT