ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ 
ರಾಜಕೀಯ

ಕಾಂಗ್ರೆಸ್ ಶಾಸಕಾಂಗ ಸಭೆ: ಮಧ್ಯಪ್ರದೇಶ ರಾಜಕೀಯ, ಬಜೆಟ್ ಮೇಲಿನ ಚರ್ಚೆ ಕುರಿತು ಸಮಾಲೋಚನೆ

ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲ ಹಾಗೂ ಬಜೆಟ್ ಮೇಲಿನ ಚರ್ಚೆಗೆ ಸಜ್ಜಾಗುವ ಕುರಿತು ಮಾರ್ಗದರ್ಶನ ನೀಡುವ ಸಂಬಂಧ ವಿಧಾನಸಭೆ ಪ್ರತಿಪಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆಯಿತು.

ಬೆಂಗಳೂರು: ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲ ಹಾಗೂ ಬಜೆಟ್ ಮೇಲಿನ ಚರ್ಚೆಗೆ ಸಜ್ಜಾಗುವ ಕುರಿತು ಮಾರ್ಗದರ್ಶನ ನೀಡುವ ಸಂಬಂಧ ವಿಧಾನಸಭೆ ಪ್ರತಿಪಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆಯಿತು.

ಎಲ್ಲಾ ಶಾಸಕರಿಗೂ ಭಾಗವಹಿಸಲು ಸೂಚಿಸಲಾಗಿದ್ದು, ಇಂದಿನ ಸಭೆಯಲ್ಲಿ ಅತ್ಯಂತ ಪ್ರಮುಖವಾಗಿ ಬಜೆಟ್ ಮೇಲಿನ ಚರ್ಚೆಯ ಸಂದರ್ಭ ಶಾಸಕರು ಯಾವ ವಿಚಾರಗಳನ್ನು ಪ್ರಸ್ತಾಪಿಸಬೇಕು, ಯಾರು ಯಾವ್ಯಾವ ವಿಚಾರಗಳ ಮೇಲೆ ಮಾತನಾಡಬೇಕು ಎಂಬ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಯಿತು.

ಇಂದಿನಿಂದ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಆರಂಭವಾಗಲಿದೆ. ಈ ಹಿನ್ನೆಲೆ ಹಿರಿಯ ಸದಸ್ಯರು ಚರ್ಚಿಸಬೇಕಾದ ವಿಚಾರಗಳು ಕಿರಿಯ ಸದಸ್ಯರು ಪ್ರಸ್ತಾಪಿಸಬೇಕಾಗಿರುವ ವಿಚಾರಗಳ ಕುರಿತು ಸಿದ್ದರಾಮಯ್ಯ ಮಾರ್ಗದರ್ಶನ ನೀಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದ ಹಲವು ಭಾಗ್ಯಗಳಿಗೆ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕತ್ತರಿ ಹಾಕಿದೆ. ಆರ್ಥಿಕ ಸಂಪನ್ಮೂಲ ಕೊರತೆಯ ಕಾರಣವನ್ನು ಇದಕ್ಕೆ ನೀಡಿದೆ. ಹಿನ್ನೆಲೆ ತಮ್ಮ ಯೋಜನೆಗಳನ್ನು ಕೈಬಿಟ್ಟಿರುವ ಕುರಿತು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.

ಇದಕ್ಕೆ ಎದುರಾಗುವ ಸರ್ಕಾರದ ಪ್ರತಿವಾದವನ್ನು ಸಮರ್ಥವಾಗಿ ತಮ್ಮ ಸದಸ್ಯರು ಹೇಗೆ ಎದುರಿಸಬೇಕು ಎಂಬ ಕುರಿತು ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಮಾರ್ಗದರ್ಶನ ಮಾಡಿದರು. ವಿಧಾನಮಂಡಲದ ಉಭಯ ಸದನಗಳಲ್ಲಿಯೂ ಆಡಳಿತ ಪಕ್ಷವನ್ನು ಸಮರ್ಥವಾಗಿ ಎದುರಿಸುವ ಪ್ರತಿಪಾದನೆಯನ್ನು ಮಂಡಿಸಬೇಕು ಎಂಬ ಕುರಿತು ಈ ಸಂದರ್ಭ ಶಾಸಕರಿಗೆ ಸಿದ್ದರಾಮಯ್ಯ ಮಾಹಿತಿ ನೀಡಿದರು. ಇನ್ನು ಪ್ರಮುಖವಾಗಿ ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲಕ್ಕೊಳಗಾಗಿ ಬೆಂಗಳೂರಿಗೆ‌ ಬಂದಿಳಿದಿರುವ ಕಾಂಗ್ರೆಸ್ ಶಾಸಕರ ನಡೆ ಅಲ್ಲಿನ ರಾಜಕೀಯ ಪರಿಸ್ಥಿತಿ ಕುರಿತು ಸಹ ಸಭೆಯಲ್ಲಿ ಚರ್ಚೆ ನಡೆಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT