ಯಡಿಯೂರಪ್ಪ 
ರಾಜಕೀಯ

'ಪ್ರಮಾಣ ಮಾಡುತ್ತೇನೆ,  ಬಿಎಸ್ ವೈ ವಿರುದ್ಧ ಅನಾಮಧೇಯ ಪತ್ರ ಬರೆದವನು ನಾನಲ್ಲ'

ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರ ವಿರುದ್ಧವಾಗಿ ಬರೆದಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಅನಾಮಧೇಯ ಪತ್ರಗಳು ವರಿಷ್ಠರನ್ನು ಕಂಗೆಡಿಸಿರುವಾಗಲೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದ ಎನ್‌.ಆರ್‌.ಸಂತೋಷ್‌ ...

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಕೆಲವು ದಿನಗಳಿಂದ ‘ಪತ್ರ ವ್ಯವಹಾರದ’ ವಿಚಾರ ಸಾಕಷ್ಟು ಸುದ್ದಿ ಮಾಡುತ್ತಿದೆ. 

ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರ ವಿರುದ್ಧವಾಗಿ ಬರೆದಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಅನಾಮಧೇಯ ಪತ್ರಗಳು ವರಿಷ್ಠರನ್ನು ಕಂಗೆಡಿಸಿರುವಾಗಲೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದ ಎನ್‌.ಆರ್‌.ಸಂತೋಷ್‌ ಭಾನುವಾರ ಬಿಡುಗಡೆ ಮಾಡಿರುವ ಪತ್ರ ಪಕ್ಷದಲ್ಲಿ ಚರ್ಚೆಗೆ ಕಾರಣವಾಗಿದೆ.

ಅನಾಮಧೇಯ ಪತ್ರಗಳಿಗೆ ಸಂತೋಷ್‌ ಅವರೇ ಕಾರಣ ಎಂಬ ಅರ್ಥದಲ್ಲಿ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿರುವ ಹಿನ್ನೆಲೆಯಲ್ಲಿ ಸಮಜಾಯಿಷಿ ನೀಡುವ ಧಾಟಿಯ ಪತ್ರ ಬರೆದಿದ್ದಾರೆ. 

‘ಕಳೆದ ಕೆಲವು ದಿನಗಳಿಂದ ನಾನು ಹೊರಗೆ ಕಾಣಿಸಿಕೊಳ್ಳದೇ ಅಂತರ್ಮುಖಿಯಾಗಿದ್ದೇನೆ. ಕಳೆದ 8–9 ವರ್ಷಗಳಲ್ಲಿ ಯಾವುದೇ ವಿಶ್ವವಿದ್ಯಾಲಯಗಳಲ್ಲಿಯೂ ಕಲಿಸದ ಪಾಠವನ್ನು ನನ್ನ ಗುರು ಬಿಎಸ್‌ವೈ ಕಲಿಸಿದ್ದಾರೆ. ರಾಜ್ಯವನ್ನು ಅವರ ನೆರಳಿನಂತೆ ಸಾಕಷ್ಟು ಬಾರಿ ಸುತ್ತಿದ್ದೇನೆ’ ಎಂದಿದ್ದಾರೆ.

‘ನಾಡಿನ ಕೋಟ್ಯಂತರ ಜನರ ಆಶಯದಂತೆ ಬಿಜೆಪಿ ಸರ್ಕಾರ ನಿರಾತಂಕವಾಗಿ ಅವಧಿ ಪೂರೈಸಬೇಕು ಎಂದು ಆಶಿಸುತ್ತಿದ್ದೇನೆ. ನನ್ನ ವಿರುದ್ಧ ಯಾರದೋ ಚಿತಾವಣೆಯಿಂದ ಸುಳ್ಳು ಆರೋಪ ಹೊರಿಸಲಾಗುತ್ತಿದೆ.  ನಾನು ಯಾರಿಗೂ ಬಹಿರಂಗವಾಗಿ ಯಾವುದೇ ಅನಾಮಧೇಯ ಪತ್ರ ಬರೆದಿಲ್ಲ, ದೂರು ನೀಡಲು ಯಾರ ಜತೆಗೂ ದೆಹಲಿಗೆ ಹೋಗಿಲ್ಲ’ ಎಂದು ಹೇಳಿದ್ದಾರೆ.

‘ಅಪಪ್ರಚಾರದಿಂದ ವೈಯಕ್ತಿಕವಾಗಿ ನೋವಾಗಿದೆ. ಇದನ್ನು ಹಿರಿಯರ ಗಮನಕ್ಕೆ ತಂದಿದ್ದೇನೆ. ಅವರು ಮಾರ್ಗದರ್ಶನ ಮಾಡಿದಂತೆ ನಡೆದುಕೊಳ್ಳುತ್ತೇನೆ. ನನಗೆ ತಿಳಿದಂತೆ ಗುರು ದೂಷಣೆ ಮಾಡಬಾರದು ಆದ್ದರಿಂದ, ಗುರುವಿನಿಂದ ದೂರ ಉಳಿದಿದ್ದೇನೆ’ ಎಂದು ಅವರು ಹೇಳಿದ್ದಾರೆ.

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಮೇಲೆ ಪ್ರಮಾಣ ಮಾಡಿ ನಾನು ಯಾವುದೇ ಪತ್ರವನ್ನು ಬರೆದಿಲ್ಲ ಹಾಗೂ ಬಿಎಸ್‌ವೈ ವಿರುದ್ಧ ದೂರು ಹೇಳಲು ದೆಹಲಿಗೂ ಹೋಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT