ರಾಜಕೀಯ

ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಮಾಡುತ್ತಿದೆ, ಪರಿಸ್ಥಿತಿ ನಿಭಾಯಿಸಲು ನಮಗೆ ಗೊತ್ತಿದೆ:ಡಿ ಕೆ ಶಿವಕುಮಾರ್ 

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗಮಾಡುತ್ತಿದೆ. ನಮ್ಮದೇ ಆದ ರಾಜಕೀಯ ತಂತ್ರಗಳಿವೆ.ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬುದು ನಮಗೆ ತಿಳಿದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗಮಾಡುತ್ತಿದೆ. ನಮ್ಮದೇ ಆದ ರಾಜಕೀಯ ತಂತ್ರಗಳಿವೆ.ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬುದು ನಮಗೆ ತಿಳಿದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.


ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಪೊಲೀಸರು ವಶಪಡಿಸಿಕೊಂಡು ಠಾಣೆಗೆ ಕರೆದೊಯ್ದ ಸಂದರ್ಭದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಇಲ್ಲಿ ಅವರೊಬ್ಬರೇ ಅಲ್ಲ ಇರುವುದು. ನಾನು ಅವರ ಬೆಂಬಲಕ್ಕಿದ್ದೇನೆ. ಕಾನೂನು, ಸುವ್ಯವಸ್ಥೆ ಆದೇಶವನ್ನು ಸರ್ಕಾರ ಜಾರಿಗೆ ತರಬೇಕಾದ ಪರಿಸ್ಥಿತಿ ಬರಬಾರದು ಎಂದು ನಾನು ಸುಮ್ಮನಿದ್ದೇನೆ ಎಂದು ಧರಣಿ ನಿರತ ದಿಗ್ವಿಜಯ್ ಸಿಂಗ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.


ಶಾಸಕರನ್ನು ಭೇಟಿ ಮಾಡಿ ಸರ್ಕಾರಕ್ಕೆ ಬೆಂಬಲ ಕೊಡಿ ಎಂದು ಕೇಳಲು ರೆಸಾರ್ಟ್ ಒಳಗೆ ಹೋಗಲು ದಿಗ್ವಿಜಯ್ ಸಿಂಗ್ ಮನವಿ ಮಾಡಿದ್ದಾರೆ. ಆದರೆ ಪೊಲೀಸರು ನಿರಾಕರಿಸುವ ಮೂಲಕ ನಮ್ಮ ಹಕ್ಕನ್ನು ಕಿತ್ತುಕೊಂಡಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇಂತಹ ಕ್ರಮ ಎಷ್ಟು ಸರಿ. ದಿಗ್ವಿಜಯ್ ಸಿಂಗ್ ಅವರು ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಲು ಬಂದಿದ್ದಾರೆ. ಒಬ್ಬ ಶಾಸಕ ಅವರನ್ನು ಫೋನ್ ಮೂಲಕ ಸಂಪರ್ಕಿಸಿ ತಮ್ಮನ್ನು ಬಂಧನದಿಂದ ಬಿಡುಗಡೆ ಮಾಡುವಂತೆ ಅಲವತ್ತುಕೊಂಡಿದ್ದರು. ಹೀಗಿರುವಾಗ ಪೊಲೀಸರು ಅವರನ್ನು ತಡೆಯುವ ಅಧಿಕಾರವಿಲ್ಲ. ಇವರೆಲ್ಲಾ ಸಿಎಂ ಹೇಳಿದಂತೆ ಕೇಳುವುದರಿಂದ ನಾವು ಮೇಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡುತ್ತೇವೆ ಎಂದರು. 

ಇದಕ್ಕೂ ಮುನ್ನ ಕಳೆದ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ದಿಗ್ವಿಜಯ್ ಸಿಂಗ್ ಅವರನ್ನು ಡಿ ಕೆ ಶಿವಕುಮಾರ್ ಭರ್ಜರಿ ಸ್ವಾಗತ ನೀಡಿ ಮುಂದಿನ ಕಾರ್ಯವೈಖರಿ ಬಗ್ಗೆ ವಿಸ್ತ್ರೃತ ಚರ್ಚೆ ನಡೆಸಿದರು. ನಂತರ ಡಿ ಕೆ ಶಿವಕುಮಾರ್ ತಮ್ಮ ಸದಾಶಿವನಗರ ನಿವಾಸದಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ರಿಜ್ವಾನ್ ಆರ್ಷದ್, ಕೃಷ್ಣ ಭೈರೇಗೌಡ, ಎನ್ ಎ ಹ್ಯಾರಿಸ್, ಭೈರತಿ ಸುರೇಶ್, ಅಖಂಡ ಶ್ರೀನಿವಾಸ್ ಮೂರ್ತಿ ಹಾಗೂ ಇತರರೊಂದಿಗೆ ಸಭೆ ನಡೆಸಿ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್ ನಲ್ಲಿ ಕೂಡಿಹಾಕಿರುವುದರ ವಿರುದ್ಧ ನಡೆಸಬೇಕಾದ ಇಂದಿನ ಕ್ರಮಗಳ ಬಗ್ಗೆ ಚರ್ಚಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!