ಎಚ್. ಡಿ. ಕುಮಾರಸ್ವಾಮಿ 
ರಾಜಕೀಯ

ಕೊರೋನಾ ವೈರಸ್: ಅಧಿವೇಶನ ಮುಂದೂಡುವಂತೆ ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ರಾಜ್ಯದಲ್ಲಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಜನತೆ ಸ್ವಯಂ ಪ್ರೇರಿತವಾಗಿ ನಿರ್ಬಂಧಗಳನ್ನು ಪಾಲಿಸುವಂತೆ ಜನತೆಗೆ ಹೇಳುತ್ತಿರುವ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ವಿಧಾನಮಂಡಲ ಅಧಿವೇಶನವನ್ನು ಮುಂದೂಡಬೇಕು...

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಜನತೆ ಸ್ವಯಂ ಪ್ರೇರಿತವಾಗಿ ನಿರ್ಬಂಧಗಳನ್ನು ಪಾಲಿಸುವಂತೆ ಜನತೆಗೆ ಹೇಳುತ್ತಿರುವ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ವಿಧಾನಮಂಡಲ ಅಧಿವೇಶನವನ್ನು ಮುಂದೂಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

"ಸರ್ಕಾರ ಹೇಳುವುದು ಒಂದು ಮಾಡುವುದು ಮತ್ತೊಂದು" ಎಂಬಂತಾಗಿದೆ. ಅಧಿವೇಶನ ಸಾರ್ವಜನಿಕರ ಜಿಜ್ಞಾಸೆಗೆ ಒಳಗಾಗಬಾರದು. ನೂರಾರು ಮಂದಿ ಒಂದೆಡೆ ಸೇರಬಾರದು ಎಂದು ತಾಕೀತು ಮಾಡುವ ಸರ್ಕಾರ ನೂರಾರು ಜನ ಪ್ರತಿನಿಧಿಗಳು, ಅಧಿಕಾರಿಗಳು, ಪತ್ರಕರ್ತರು ಹಾಗೂ ಸಾಮಾನ್ಯ ಜನತೆ ಒಂದೇ ಕಡೆ ಸಮಾವೇಶಗೊಳ್ಳುವ ಅಧಿವೇಶನ ನಡೆಸುವುದು ವಾಸ್ತವ ಪರಿಸ್ಥಿತಿಯಲ್ಲಿ ಸರಿಯಲ್ಲ ಎಂದು ಅವರು ಟ್ವೀಟ್ ನಲ್ಲಿ ಸರ್ಕಾರಕ್ಕೆ ತಿವಿದಿದ್ದಾರೆ. 

ಕಳೆದ ಫೆಬ್ರವರಿಯಿಂದಲೇ ವೈದ್ಯಕೀಯ ವೃಂದದವರು, ಪೊಲೀಸರು, ಪೌರಕಾರ್ಮಿಕರು ಕೊರೋನಾ ವಿರುದ್ಧ ಹೋರಾಡುತ್ತಿದ್ದಾರೆ. ಇವರಿಗೆ ಸರ್ಕಾರ ಫೆಬ್ರವರಿಯಿಂದ ಆರಂಭಿಸಿ, ಕೊರೋನಾ ವೈರಸ್ ವಿರುದ್ಧ ಹೋರಾಟ ಮುಕ್ತಾಯವಾಗುವತನಕ ಪ್ರತಿ ತಿಂಗಳು ಇವರೆಲ್ಲರಿಗೂ ಪ್ರೋತ್ಸಾಹ ಧನ ನೀಡಬೇಕು. ಅವರ ಧೈರ್ಯ, ತ್ಯಾಗಕ್ಕೆ ಸರ್ಕಾರ ಮನ್ನಣೆ ನೀಡಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳ ಚುನಾವಣೆ: ರಾಜಕೀಯ ಪಕ್ಷಗಳ ಖರ್ಚು- ದೇಣಿಗೆ ಮಾಹಿತಿ ಬಹಿರಂಗ; ಆಡಳಿತಾರೂಢ ಬಿಜೆಪಿಗೆ ಬಂದಿದ್ದೆಷ್ಟು?

'ಚಿಂತೆ ಮಾಡುತ್ತ ಕೂರಬೇಡಿ'; ಟಾಕ್ಸಿಕ್ ಸೋಲು ಒಪ್ಪಿಕೊಂಡ ಯಶ್‌: ಆಪ್ತನ ಬಳಿ ರಾಕಿಂಗ್ ಸ್ಟಾರ್ ಹೇಳಿದ್ದೇನು?

ಈ ದಶಕದ ಅಂತ್ಯಕ್ಕೆ AI ನಮ್ಮನ್ನೆಲ್ಲಾ ಕೊಲ್ಲುತ್ತೆ: Anthropic ಸಂಶೋಧಕನ ರಾಜೀನಾಮೆ; ಸುರಕ್ಷತಾ ಕಾರ್ಯನಿರ್ವಾಹಕರಿಂದಲೂ ಬೆಂಬಲ!

ಸೆಪ್ಟೆಂಬರ್ 12 ರಂದು ತಮಿಳುನಾಡಿನಾದ್ಯಂತ DMK ಪ್ರತಿಭಟನೆ! ಕಾರಣವೇನು ಗೊತ್ತಾ?

'ದೊಡ್ಡ ತಂಡ ನಿಜ, ಆದರೆ ಅಸಾಧ್ಯವೇನಲ್ಲ'.. 'ಏಷ್ಯಾಕಪ್ ಗೆಲ್ಲಬೇಕಾದರೆ ಭಾರತವನ್ನು ಮಣಿಸಲೇಬೇಕು'