ಎಚ್. ಡಿ. ಕುಮಾರಸ್ವಾಮಿ 
ರಾಜಕೀಯ

ಕೊರೋನಾ ವೈರಸ್: ಅಧಿವೇಶನ ಮುಂದೂಡುವಂತೆ ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ರಾಜ್ಯದಲ್ಲಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಜನತೆ ಸ್ವಯಂ ಪ್ರೇರಿತವಾಗಿ ನಿರ್ಬಂಧಗಳನ್ನು ಪಾಲಿಸುವಂತೆ ಜನತೆಗೆ ಹೇಳುತ್ತಿರುವ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ವಿಧಾನಮಂಡಲ ಅಧಿವೇಶನವನ್ನು ಮುಂದೂಡಬೇಕು...

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಜನತೆ ಸ್ವಯಂ ಪ್ರೇರಿತವಾಗಿ ನಿರ್ಬಂಧಗಳನ್ನು ಪಾಲಿಸುವಂತೆ ಜನತೆಗೆ ಹೇಳುತ್ತಿರುವ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ವಿಧಾನಮಂಡಲ ಅಧಿವೇಶನವನ್ನು ಮುಂದೂಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

"ಸರ್ಕಾರ ಹೇಳುವುದು ಒಂದು ಮಾಡುವುದು ಮತ್ತೊಂದು" ಎಂಬಂತಾಗಿದೆ. ಅಧಿವೇಶನ ಸಾರ್ವಜನಿಕರ ಜಿಜ್ಞಾಸೆಗೆ ಒಳಗಾಗಬಾರದು. ನೂರಾರು ಮಂದಿ ಒಂದೆಡೆ ಸೇರಬಾರದು ಎಂದು ತಾಕೀತು ಮಾಡುವ ಸರ್ಕಾರ ನೂರಾರು ಜನ ಪ್ರತಿನಿಧಿಗಳು, ಅಧಿಕಾರಿಗಳು, ಪತ್ರಕರ್ತರು ಹಾಗೂ ಸಾಮಾನ್ಯ ಜನತೆ ಒಂದೇ ಕಡೆ ಸಮಾವೇಶಗೊಳ್ಳುವ ಅಧಿವೇಶನ ನಡೆಸುವುದು ವಾಸ್ತವ ಪರಿಸ್ಥಿತಿಯಲ್ಲಿ ಸರಿಯಲ್ಲ ಎಂದು ಅವರು ಟ್ವೀಟ್ ನಲ್ಲಿ ಸರ್ಕಾರಕ್ಕೆ ತಿವಿದಿದ್ದಾರೆ. 

ಕಳೆದ ಫೆಬ್ರವರಿಯಿಂದಲೇ ವೈದ್ಯಕೀಯ ವೃಂದದವರು, ಪೊಲೀಸರು, ಪೌರಕಾರ್ಮಿಕರು ಕೊರೋನಾ ವಿರುದ್ಧ ಹೋರಾಡುತ್ತಿದ್ದಾರೆ. ಇವರಿಗೆ ಸರ್ಕಾರ ಫೆಬ್ರವರಿಯಿಂದ ಆರಂಭಿಸಿ, ಕೊರೋನಾ ವೈರಸ್ ವಿರುದ್ಧ ಹೋರಾಟ ಮುಕ್ತಾಯವಾಗುವತನಕ ಪ್ರತಿ ತಿಂಗಳು ಇವರೆಲ್ಲರಿಗೂ ಪ್ರೋತ್ಸಾಹ ಧನ ನೀಡಬೇಕು. ಅವರ ಧೈರ್ಯ, ತ್ಯಾಗಕ್ಕೆ ಸರ್ಕಾರ ಮನ್ನಣೆ ನೀಡಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT