ಸಿದ್ದರಾಮಯ್ಯ 
ರಾಜಕೀಯ

ಇದೊಂದು ಮಾನ‌ ಮರ್ಯಾದೆ ಇಲ್ಲದ ಸರ್ಕಾರ: ಸಿದ್ದರಾಮಯ್ಯ ವಾಗ್ದಾಳಿ

ಸರ್ಕಾರಕ್ಕೆ ನಾಲ್ಕು ತಿಂಗಳಿಗೆ ಮುಂಗಡ ಲೇಖಾನುದಾನ ತೆಗೆದುಕೊಂಡು ಮತ್ತೆ ಜೂನ್‌ನಲ್ಲಿ ಅಧಿವೇಶನ ಕರೆದು ಪೂರ್ಣ ಪ್ರಮಾಣದಲ್ಲಿ ಬಜೆಟ್ ಒಪ್ಪಿಗೆ ಪಡೆಯಲು ಸೂಚಿಸಲಾಗಿತ್ತಾದಾರೆ ಸರ್ಕಾರ ಇದಕ್ಕೆ ಒಪ್ಪಿಕೊಳ್ಳಲಿಲ್ಲ. ಇದೊಂದು ಮಾನಗೆಟ್ಟ ಸರ್ಕಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೆಂಗಳೂರು: ಸರ್ಕಾರಕ್ಕೆ ನಾಲ್ಕು ತಿಂಗಳಿಗೆ ಮುಂಗಡ ಲೇಖಾನುದಾನ ತೆಗೆದುಕೊಂಡು ಮತ್ತೆ ಜೂನ್‌ನಲ್ಲಿ ಅಧಿವೇಶನ ಕರೆದು ಪೂರ್ಣ ಪ್ರಮಾಣದಲ್ಲಿ ಬಜೆಟ್ ಒಪ್ಪಿಗೆ ಪಡೆಯಲು ಸೂಚಿಸಲಾಗಿತ್ತಾದಾರೆ ಸರ್ಕಾರ ಇದಕ್ಕೆ ಒಪ್ಪಿಕೊಳ್ಳಲಿಲ್ಲ. ಇದೊಂದು ಮಾನಗೆಟ್ಟ ಸರ್ಕಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ವಿಧಾನಸಭೆ ಸಭಾತ್ಯಾಗ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನಸಭಾ ಅಧ್ಯಕ್ಷರು ರಾಜ್ಯ ಮತ್ತು ದೇಶದಲ್ಲಿ ಕೊರೊನಾ ವೇಗವಾಗಿ ಹರಡುತ್ತಿರುವುದರಿಂದ ವಿಧಾನಸಭೆ ಮುಂದೂಡಬೇಕು. ಸಂಸತ್ತು ಕೂಡ ಮುಂದೂಡಲಾಗಿದೆ. 

ಹೀಗಾಗಿ ಸದನ ಸಲಹಾ ಸಮಿತಿ ಸಭೆಯಲ್ಲಿ ಸರ್ಕಾರ ಮಾ ,27,28. ರ ವರೆಗೆ ನಡೆಸುವಂತೆ ಪ್ರಸ್ತಾಪ ಮುಂದಿಟ್ಟಿದ್ದರು. ಬಜೆಟ್ ಹಾಗೂ ಬೇಡಿಕೆ ಮೇಲೆ ಚರ್ಚೆಗೆ ಎರಡೂ ಒಂದೆ ಬಾರಿ ಇಟ್ಟಿದ್ದರು. ಅದಕ್ಕೆ ಸಂಬಂಧ ಪಟ್ಟ ಸಚಿವರು ಉತ್ತರ ಕೊಡಬೇಕು. 

ಹೀಗಾಗಿ ಸಮಯ ಬಹಳ ಬೇಕು. ಕೊರೊನಾ ವೈರಸ್ ಹರಡುವಿಕೆ ಜೋರಾಗಿರುವುದರಿಂದ ಅಧಿವೇಶನವನ್ನು ನಡೆಸುವುದು ಸೂಕ್ತ ಅಲ್ಲ ಎನ್ನುವ ಕಾರಣಕ್ಕೆ ಬಜೆಟ್ ಗೆ ಒಪ್ಪಿಗೆ ಕೊಡುತ್ತೇವೆ ಸದನ ಮುಂದೂಡಿ ಎಂದು ಸಲಹೆ ನೀಡಿದೆವು. ಆದರೆ ಅವರು ಅನೇಕ ಬಿಲ್ ಗಳನ್ನು ಜಾರಿಗೆ ತರಲು ಮುಂದಾಗಿದ್ದಾರೆ. ಇದು ಸರಿಯಲ್ಲ ಎಂದು ಖಡಕ್ ಆಗಿ‌ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT