ರಾಜಕೀಯ

ಜನ್ಮ ದಿನಕ್ಕೆ ಶುಭಾಶಯ ಕೋರಲು ಆಗಮಿಸದಂತೆ ಡಿಕೆಶಿ ಮನವಿ

Nagaraja AB

ಬೆಂಗಳೂರು: ಮೇ 15ರಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ಹುಟ್ಟುಹಬ್ಬ. ಅಂದು ತಾವು  ಊರಲ್ಲಿ ಇಲ್ಲದಿರುವುದರಿಂದ ಜನ್ಮದಿನದ ಶುಭಾಶಯ ಕೋರಲು ಯಾರೂ  ಬರಬಾರದೆಂದು ಅವರು ಮನವಿ ಮಾಡಿದ್ದಾರೆ. 

ಅನಿವಾರ್ಯ ಕಾರಣಗಳಿಂದ ಮೇ 14 ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಇರುವುದಿಲ್ಲ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

 ನಾಯಕರಾಗಲಿ, ಪಕ್ಷದ ಕಾರ್ಯಕರ್ತರಾಗಲಿ, ಅಭಿಮಾನಿ ಬಂಧುಗಳಾಗಲಿ, ಕನಕಪುರ  ಕ್ಷೇತ್ರದವರಾಗಲಿ ಯಾರೂ ಕೂಡ ಸದಾಶಿವನಗರ ನಿವಾಸಕ್ಕಾಗಲಿ, ಪಕ್ಷದ ಕಚೇರಿಗಾಗಲಿ ಬರುವುದು  ಬೇಡ. ಯಾರೂ ಇದನ್ನು ತಪ್ಪಾಗಿ ಭಾವಿಸಬಾರದು ಎಂದು ಶಿವಕುಮಾರ್ ವಿನಂತಿ ಮಾಡಿದ್ದಾರೆ.

SCROLL FOR NEXT