ಡಿಕೆ ಶಿವಕುಮಾರ್ 
ರಾಜಕೀಯ

ಪಕ್ಷ ಪುನರ್ ಸಂಘಟಿಸಲು ಡಿಕೆಶಿ ಹೊಸ ತಂತ್ರ: ಮುಂದಿನ 5 ದಿನಗಳ ಕಾಲ ಕಾರ್ಯಕರ್ತರ ಜೊತೆ ಸಮಾಲೋಚನೆ

ಲೋಕಸಭೆ ಚುನಾವಣೆಯ  ಹೀನಾಯ ಸೋಲಿನ ನಂತರ ಕಾಂಗ್ರೆಸ್ ತೀವ್ರ ಅಪಮಾನ ಎದುರಿಸಿತ್ತು. ಚುನಾವಣೆ ಮುಗಿದು ಒಂದು ವರ್ಷದ ನಂತರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷ ಸಂಘಟನೆಗೆ ಸಜ್ಜಾಗಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆಯ  ಹೀನಾಯ ಸೋಲಿನ ನಂತರ ಕಾಂಗ್ರೆಸ್ ತೀವ್ರ ಅಪಮಾನ ಎದುರಿಸಿತ್ತು. ಚುನಾವಣೆ ಮುಗಿದು ಒಂದು ವರ್ಷದ ನಂತರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷ ಸಂಘಟನೆಗೆ ಸಜ್ಜಾಗಿದ್ದಾರೆ.

ಕೊರೋನಾ ನಡುವೆಯೂ  ಮುಂದಿನ ಐದು ದಿನಗಳ ಕಾಲ ಹಲವು ಸಭೆಗಳನ್ನು ನಡೆಸಲು ತೀರ್ಮಾನಿಸಿದ್ದಾರೆ, ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಜೊತೆ ತಾಲೂಕು ಹಾಗೂ ನಿಗಮ- ಮಂಡಳಿಯ ಮಾಜಿ ಅಧ್ಯಕ್ಷರುಗಳ ಜೊತೆ ಸರಣಿ ಸಭೆ ನಡೆಸಲಿದ್ದಾರೆ.

ಕಳೆದ ವರ್ಷ ಕಾಂಗ್ರೆಸ್ ನ 14 ಶಾಸಕರು ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ ಅನೇಕ ಪ್ರದೇಶಗಳಲ್ಲಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರನ್ನು ಹೊರ ಹಾಕುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿದ್ದವು.

ಬೂತ್ ಮಟ್ಟದಲ್ಲಿ  ಪಕ್ಷ ಸಂಘಟಿಸಲು ಮುಂದಾಗಿರುವ ಡಿಕೆಶಿ, ಅನೇಕ ಭಾಗಗಳಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ವಿಶೇಷವಾಗಿ ಉತ್ತರ ಕರ್ನಾಟಕ ಮತ್ತು ಕೇಂದ್ರ ಕರ್ನಾಟಕ ಭಾಗಗಳ ಕಡೆ ಗಮನ ಹರಿಸಲಿದ್ದಾರೆ.

ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕವಾಗಿ 1 ತಿಂಗಳು ಕಳೆದಿದ್ದು. ಮೇ 31 ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ, ಅದಕ್ಕಾಗಿ ಎಲ್ಲಾ ಸಿದ್ಧತೆ ನಡೆದಿದ್ದು, ರಾಜ್ಯದ 6,021 ಗ್ರಾಮ ಪಂಚಾಯಿತಿ ಸದಸ್ಯರುಗಳನ್ನು ಕರೆ ತರಲು ಯೋಜಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT