ಡಿಕೆ ಶಿವಕುಮಾರ್ 
ರಾಜಕೀಯ

ಪಕ್ಷ ಪುನರ್ ಸಂಘಟಿಸಲು ಡಿಕೆಶಿ ಹೊಸ ತಂತ್ರ: ಮುಂದಿನ 5 ದಿನಗಳ ಕಾಲ ಕಾರ್ಯಕರ್ತರ ಜೊತೆ ಸಮಾಲೋಚನೆ

ಲೋಕಸಭೆ ಚುನಾವಣೆಯ  ಹೀನಾಯ ಸೋಲಿನ ನಂತರ ಕಾಂಗ್ರೆಸ್ ತೀವ್ರ ಅಪಮಾನ ಎದುರಿಸಿತ್ತು. ಚುನಾವಣೆ ಮುಗಿದು ಒಂದು ವರ್ಷದ ನಂತರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷ ಸಂಘಟನೆಗೆ ಸಜ್ಜಾಗಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆಯ  ಹೀನಾಯ ಸೋಲಿನ ನಂತರ ಕಾಂಗ್ರೆಸ್ ತೀವ್ರ ಅಪಮಾನ ಎದುರಿಸಿತ್ತು. ಚುನಾವಣೆ ಮುಗಿದು ಒಂದು ವರ್ಷದ ನಂತರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷ ಸಂಘಟನೆಗೆ ಸಜ್ಜಾಗಿದ್ದಾರೆ.

ಕೊರೋನಾ ನಡುವೆಯೂ  ಮುಂದಿನ ಐದು ದಿನಗಳ ಕಾಲ ಹಲವು ಸಭೆಗಳನ್ನು ನಡೆಸಲು ತೀರ್ಮಾನಿಸಿದ್ದಾರೆ, ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಜೊತೆ ತಾಲೂಕು ಹಾಗೂ ನಿಗಮ- ಮಂಡಳಿಯ ಮಾಜಿ ಅಧ್ಯಕ್ಷರುಗಳ ಜೊತೆ ಸರಣಿ ಸಭೆ ನಡೆಸಲಿದ್ದಾರೆ.

ಕಳೆದ ವರ್ಷ ಕಾಂಗ್ರೆಸ್ ನ 14 ಶಾಸಕರು ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ ಅನೇಕ ಪ್ರದೇಶಗಳಲ್ಲಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರನ್ನು ಹೊರ ಹಾಕುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿದ್ದವು.

ಬೂತ್ ಮಟ್ಟದಲ್ಲಿ  ಪಕ್ಷ ಸಂಘಟಿಸಲು ಮುಂದಾಗಿರುವ ಡಿಕೆಶಿ, ಅನೇಕ ಭಾಗಗಳಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ವಿಶೇಷವಾಗಿ ಉತ್ತರ ಕರ್ನಾಟಕ ಮತ್ತು ಕೇಂದ್ರ ಕರ್ನಾಟಕ ಭಾಗಗಳ ಕಡೆ ಗಮನ ಹರಿಸಲಿದ್ದಾರೆ.

ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕವಾಗಿ 1 ತಿಂಗಳು ಕಳೆದಿದ್ದು. ಮೇ 31 ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ, ಅದಕ್ಕಾಗಿ ಎಲ್ಲಾ ಸಿದ್ಧತೆ ನಡೆದಿದ್ದು, ರಾಜ್ಯದ 6,021 ಗ್ರಾಮ ಪಂಚಾಯಿತಿ ಸದಸ್ಯರುಗಳನ್ನು ಕರೆ ತರಲು ಯೋಜಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT