ದೇವೇಗೌಡರ ಜೊತೆ ಶಿವಕುಮಾರ್ ಭೋಜನ 
ರಾಜಕೀಯ

ಮರೆಯಾದ ವೈರತ್ವ: ಡಿಕೆ ಶಿವಕುಮಾರ್ ಜೊತೆ ಹುಟ್ಟುಹಬ್ಬದ ಊಟ ಸವಿದ ದೇವೇಗೌಡರು!

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜೆಡಿಎಸ್ ಪರಮೋಚ್ಚ ನಾಯಕ ಎಚ್.ಡಿ ದೇವೇಗೌಡ ಈ ಬಾರಿ ಹುಟ್ಟುಹಬ್ಬ ಸರಳವಾಗಿ ಆಚರಿಸಿಕೊಂಡರು.  ಈ ಬಾರಿ ತಾವು ಹುಟ್ಟು ಹಬ್ಬ ಆಚರಿಸಿಕೊಳ್ಳುವುದಿಲ್ಲ, ಹೀಗಾಗಿ ಬೆಂಬಲಿಗರು ಮತ್ತು ಅಭಿಮಾನಿಗಳು ಮನೆ ಹತ್ತಿರ ಬರಬಾರದೆಂದು ದೇವೇಗೌಡರು  ಪತ್ರದ ಮೂಲಕ ಮನವಿ ಮಾಡಿದ್ದರು.

ಬೆಂಗಳೂರು: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜೆಡಿಎಸ್ ಪರಮೋಚ್ಚ ನಾಯಕ ಎಚ್.ಡಿ ದೇವೇಗೌಡ ಈ ಬಾರಿ ಹುಟ್ಟುಹಬ್ಬ ಸರಳವಾಗಿ ಆಚರಿಸಿಕೊಂಡರು. ಈ ಬಾರಿ ತಾವು ಹುಟ್ಟು ಹಬ್ಬ ಆಚರಿಸಿಕೊಳ್ಳುವುದಿಲ್ಲ, ಹೀಗಾಗಿ ಬೆಂಬಲಿಗರು ಮತ್ತು ಅಭಿಮಾನಿಗಳು ಮನೆ ಹತ್ತಿರ ಬರಬಾರದೆಂದು ದೇವೇಗೌಡರು  ಪತ್ರದ ಮೂಲಕ ಮನವಿ ಮಾಡಿದ್ದರು,

ಆದರೂ ಪಕ್ಷದ ಕಚೇರಿಯಲ್ಲಿ ಅವರ ಬೆಂಬಲಿರು 88 ಕೆಜಿ ತೂಕದ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹು ದೊಡ್ಡ ಸವಾಲಾಗಿತ್ತು.  ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮನೆಗೆ ಹಲವು ಗಣ್ಯರು ಬಂದು ಶುಭಾಶ ಕೋರಿದರು, ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಜೊತೆ ಮಧ್ಯಾಹ್ನದ  ಭೋಜನ ಸವಿದರು.

ಶುಭಾಶಯ ಕೋರಲು ಡಿಕೆಶಿವಕುಮಾರ್ ದೊಡ್ಡಗೌಡರ ನಿವಾಸಕ್ಕೆ ಆಗಗಮಿಸಿದ್ದರು. ಈ ವೇಳೆ ಊಟ ಮಾಡಿಕೊಂಡು ಹೋಗುವಂತೆ ದೇವೇಗೌಡರು ನೀಡಿದ ಆಹ್ವಾನವನ್ನು ಶಿವಕುಮಾರ್ ಅವರಿಗೆ ನಿರಾಕರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಮಾಜಿ ಪ್ರಧಾನಿಗಳ ಜೊತೆ ಊಟ ಸವಿದರು. ಬಾಳೆ ಎಲೆಯಲ್ಲಿ ದಕ್ಷಿಣ ಭಾರತದ ಶೈಲಿಯ ಊಟ ಬಡಿಸಲಾಯಿತು. ಇಬ್ಬರು ಜೊತೆಯಾಗಿ ಕುಳಿತು ಭೋಜನ ಸವಿದರು, ಇದೇ ವೇಳೆ ಡಿಸಿಎಂ ಅಶ್ವತ್ಥ ನಾರಾಯಣ ಕೂಡ  ಗೌಡರ ಮನೆಗೆ ಭೇಟಿ ನೀಡಿ ಶುಭ ಕೋರಿದರು.

ಶಿವಕುಮಾರ್  1989 ರಲ್ಲಿ ದೇವೇಗೌಡರನ್ನು ಹಾಗೂ 1999ರಲ್ಲಿ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದರು. ಇನ್ನು 2018 ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿತ್ವಕ್ಕೆ ತರುವಲ್ಲಿ ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು. ಇನ್ನು ದೇವೇಗೌಡರ 88ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ 88 ಜೆಡಿಎಸ್ ಕಾರ್ಯಕರ್ತರು ರಕ್ತದಾನ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT