ಸಿದ್ದರಾಮಯ್ಯ 
ರಾಜಕೀಯ

ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯನ್ನು ಸಂಪುಟದಿಂದ ಕೈಬಿಡಿ: ಸಿದ್ದರಾಮಯ್ಯ ಒತ್ತಾಯ

ರೈತ ಮಹಿಳೆಯನ್ನು ಅವಾಚ್ಯ ಪದ ಬಳಸಿ ನಿಂದಿಸಿದ ಸಚಿವ ಮಾಧುಸ್ವಾಮಿಯನ್ನು ತಲಕ್ಷಣ ಸಂಪುಟದಿಂದ ಕೈಬಿಟ್ಟು ಸರ್ಕಾರದ ಮಾನ‌ ಉಳಿಸಬೇಕು ಎಂದು ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬೆಂಗಳೂರು: ರೈತ ಮಹಿಳೆಯನ್ನು ಅವಾಚ್ಯ ಪದ ಬಳಸಿ ನಿಂದಿಸಿದ ಸಚಿವ ಮಾಧುಸ್ವಾಮಿಯನ್ನು ತಲಕ್ಷಣ ಸಂಪುಟದಿಂದ ಕೈಬಿಟ್ಟು ಸರ್ಕಾರದ ಮಾನ‌ ಉಳಿಸಬೇಕು ಎಂದು ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

"ಅಹವಾಲು ಸಲ್ಲಿಸಲು ಬಂದಿದ್ದ ಅನ್ಯಾಯಕ್ಕೊಳಗಾಗಿರುವ ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯವರ ದುರ್ವರ್ತನೆ ಅಕ್ಷಮ್ಯ. ಸಿಎಂ ಯಡಿಯೂರಪ್ಪನವರು ತಕ್ಷಣ ಸಚಿವರು, ಆ ರೈತ ಮಹಿಳೆಯ ಕ್ಷಮೆ‌ ಯಾಚಿಸುವಂತೆ‌‌ ಮಾಡಿ, ಅವರನ್ನು‌ ಸಂಪುಟದಿಂದ ಕೈ ಬಿಟ್ಟು‌‌ ಸರ್ಕಾರದ ಮಾನ‌ ಉಳಿಸಬೇಕು." ಸಿದ್ದರಾಮಯ್ಯ ಟ್ವೀಟ್ ಮಾಡಿ ತಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ವಿವರ

ಕೋಲಾರದ ಎಸ್‌.ಅಗ್ರಹಾರದಲ್ಲಿ ಬುಧವಾರ ಕೆರೆಗಳ ಒತ್ತುವರಿ ತೆರವಿಗಾಗಿ ಮನವಿ ಸಲ್ಲಿಸಿದ್ದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮಹಿಳಾ ಸದಸ್ಯೆ ನಳಿನಿ ಅವರ ಮೇಲೆ ಸಚಿವ ಮಾಧುಸ್ವಾಮಿ ಅವಾಚ್ಯ ಶಬ್ದಗಳ ಬಳಕೆ ಮಾಡಿ ಜನಾಕ್ರೋಶಕ್ಕೆ ಗುರಿಯಾಗಿದ್ದಾರೆ.

ಕೆ.ಸಿ ವ್ಯಾಲಿ ಯೋಜನೆ ವ್ಯಾಪ್ತಿಯ ಎಸ್‌.ಅಗ್ರಹಾರ ಗ್ರಾಮದ ಕೆರೆ ಪರಿಶೀಲನೆಗಾಗಿ ಬಂದಿದ್ದ ಸಚಿವರಿಗೆ ನಳಿನಿಯವರು ಕೆರೆ ಒತ್ತುವರಿಯ ತೆರವಿಗಾಗಿ ಮನವಿ ಮಾಡಿದ್ದಾಗ ಸಚಿವರು , ‘ಹೇ ರಾಸ್ಕಲ್‌, ಮುಚ್ಚು ಬಾಯಿ’ ಎಂದು ಗದರಿದ್ದಾರೆ. ಇದರಿಂದ ಕೆರಳಿದ ಮಹಿಳಾ ಸದಸ್ಯರು ಸಚಿವರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಗಲಿಬಿಲಿಗೊಂಡ ಸಚಿವರು ಮಹಿಳೆಯರನ್ನು ದೂರ ಕಳಿಸುವಂತೆ ಪೋಲೀಸರಿಗೆ ಹೇಳಿದ್ದಾರೆ.  ಆಗ ಸಚಿವ ಆದೇಶದಂತೆ ಮಹಿಳೆಯರನ್ನು ಕರೆದೊಯ್ಯಲು ಹೋದ ಪೋಲೀಸರ ಮೇಲೆ ಮಹಿಳೆಯರು ಸಿಟ್ತಾಗಿದ್ದು ಸ್ಥಳದಲ್ಲಿ ಗೊಂದಲ ವಾತಾವರಣ ಮೂಡಿತ್ತು.

ಬಳಿಕ ಅಲ್ಲಿನ ಮಹಿಳೆಯರನ್ನು ಎಳೆದೊಯ್ದು ಪೋಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT