ಸಿದ್ದರಾಮಯ್ಯ 
ರಾಜಕೀಯ

ಮೋದಿ ಮಾಡಿದ ತಪ್ಪಿನಿಂದ ದೇಶಕ್ಕೆ ಕೊರೊನಾ ಬಂದಿದೆಯೇ ಹೊರತು ತಬ್ಲಿಘಿಗಳಿಂದಲ್ಲ: ಸಿದ್ದರಾಮಯ್ಯ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಡಿದ ತಪ್ಪಿನಿಂದ ದೇಶಕ್ಕೆ ಕೊರೋನಾ ಬಂದಿದೆಯೇ ಹೊರತು ತಬ್ಲಿಘಿಗಳಿಂದ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಡಿದ ತಪ್ಪಿನಿಂದ ದೇಶಕ್ಕೆ ಕೊರೋನಾ ಬಂದಿದೆಯೇ ಹೊರತು ತಬ್ಲಿಘಿಗಳಿಂದ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ವಾಗ್ದಾಳಿ ನಡೆಸಿದ್ದಾರೆ. 

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕುದೂರಿನಲ್ಲಿ  ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಸಮುದಾಯದ 4 ಸಾವಿರ ಜನರಿಗೆ ರಂಜಾನ್ ಪ್ರಯುಕ್ತ ಫುಡ್ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು ಜನವರಿ 30 ಕ್ಕೆ  ಕೇರಳದಲ್ಲಿ ಮೊದಲ ಕೊರೋನಾ ಕೇಸ್ ಪತ್ತೆಯಾಗಿತ್ತು. ಅಂದೇ ವಿಮಾನ ಹಾರಾಟ ಸ್ಥಗಿತ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಕೊರೋನಾ ಹರಡಲು ತಬ್ಲಿಘಿಗಳು ಕಾರಣ ಎಂದು ಆರ್ ಎಸ್ ಎಸ್ ಮತ್ತು ಬಿಜೆಪಿಯವರು ದೇಶದಾದ್ಯಂತ ಪ್ರಚಾರ ಮಾಡುತ್ತಿದ್ದಾರೆ. ನಿಜ ಏನೆಂದರೆ ಪ್ರಧಾನಿ ಮೋದಿ ಮಾಡಿದ ತಪ್ಪಿಗೆ ಈ ದೇಶಕ್ಕೆ ಕೊರೋನಾ  ಬಂದಿದೆಯೇ ವಿನಃ ತಬ್ಲಿಘಿಗಳಿಂದ ಅಲ್ಲ. ಚೀನಾ, ಸ್ಪೇನ್, ಇಟಲಿ ಮತ್ತು ಅಮೆರಿಕದಲ್ಲಿ ತಬ್ಲಿಘಿಯವರು ಇದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಮೋದಿ ಜನರಿಗೆ ಬರೀ ಸುಳ್ಳು ಹೇಳ್ತಿದ್ದಾರೆ ಅಷ್ಟೇ, 20 ಲಕ್ಷ ಕೋಟಿಯನ್ನು ಅವರಿಗೆ ಬರೆಯೋಕೂ  ಅವರಿಗೆ ಬರಲ್ಲ. ಇನ್ನೂ ಯಡಿಯೂರಪ್ಪ ರೈತನ ಮಗ ಅಂತಾರೆ, ಅವರು ಯಾವ ರೈತನ ಮಗ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT