ರಾಜಕೀಯ

ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು- ಉಗ್ರಪ್ಪ ಟೀಕೆ

Nagaraja AB

ಬೆಂಗಳೂರು: ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಮಕರಣ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವರ್ಕರ್ ಹೋರಾಟಗಾರರಲ್ಲ ಎಂದು ತಾವು ಹೇಳುತ್ತಿಲ್ಲ. ಆದರೆ ಅವರು ಸ್ವಾತಂತ್ರ ಹೋರಾಟ ನಿಲ್ಲಿಸಿ ಬ್ರಿಟಿಷರಿಗೆ ಸಹಾಯಮಾಡಿದ್ದರು. ಸ್ವಾತಂತ್ರ್ಯ ಹೋರಾಟದಿಂದ ವಿಮುಖರಾಗಿದ್ದರು ಎಂದರು. 

ಕೊರೋನಾದಂತಹ  ಸಂಕಷ್ಟದ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾವರ್ಕರ್ ವಿಷಯ ತೆಗೆದುಕೊಂಡು ಜನಸಾಮಾನ್ಯರನ್ನು ದಾರಿತಪ್ಪಿಸಲು ಹೊರಟಿದ್ದಾರೆ.ರಾಜ್ಯದಲ್ಲಿ ಹಲವು‌ ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ. ಅವರ ಹೆಸರನ್ನು ಬೇಕಾದರೆ ಸೇತುವೆಗೆ ಇಡಲಿ. ಅದನ್ನು ಬಿಟ್ಟು ಸಾರ್ವಕರ್ ಹೆಸರು ಇಡುವುದು ಬೇಡ ಎಂದು ರಾಜ್ಯ ಸರ್ಕಾರವನ್ನು ಉಗ್ರಪ್ಪ ಒತ್ತಾಯಿಸಿದ್ದಾರೆ.

SCROLL FOR NEXT