ನಳಿನ್ ಕುಮಾರ್ ಕಟೀಲ್ ಮತ್ತು ಡಿಕೆ ಶಿವಕುಮಾರ್ 
ರಾಜಕೀಯ

ಖಾಲಿ ಉಳಿದಿವೆ ಪ್ರಮುಖ ಹುದ್ದೆಗಳು: ಪದಾಧಿಕಾರಿಗಳ ನೇಮಕದ ಬಗ್ಗೆ ಕಾಂಗ್ರೆಸ್-ಬಿಜೆಪಿ ದಿವ್ಯ ನಿರ್ಲಕ್ಷ್ಯ!

ಕೊರೋನಾ  ಸಾಂಕ್ರಾಮಿಕ ರೋಗ ಕರ್ನಾಟಕದ ಎರಡು ಬಹುದೊಡ್ಡ ಪಕ್ಷಗಳಿಗೆ ಅನಿರೀಕ್ಷಿತ ಸಮಸ್ಯೆಗಳನ್ನು ತಂದೊಡ್ಡಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಹಲವು ಹುದ್ದೆಗಳು ಖಾಲಿಯಿದ್ದು ನೇಮಕ ಮಾಡಲು ಸಾಧ್ಯವಾಗುತ್ತಿಲ್ಲ,

ಬೆಂಗಳೂರು: ಕೊರೋನಾ  ಸಾಂಕ್ರಾಮಿಕ ರೋಗ ಕರ್ನಾಟಕದ ಎರಡು ಬಹುದೊಡ್ಡ ಪಕ್ಷಗಳಿಗೆ ಅನಿರೀಕ್ಷಿತ ಸಮಸ್ಯೆಗಳನ್ನು ತಂದೊಡ್ಡಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಹಲವು ಹುದ್ದೆಗಳು ಖಾಲಿಯಿದ್ದು ನೇಮಕ ಮಾಡಲು ಸಾಧ್ಯವಾಗುತ್ತಿಲ್ಲ,

ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಪದಾಧಿಕಾರಿಗಳ ನೇಮಕ 2 ಪಕ್ಷಗಳಿಗೂ ಮಹತ್ವದ ವಿಷಯವಾಗಿದೆ. 2019 ರ ಆಗಸ್ಟ್ ನಲ್ಲಿ ನಳಿನ್ ಕುಮಾರ್ ಕಟೀಲ್ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ನಂತರ ಹಲವು ಜಿಲ್ಲೆಗಳ ಪ್ರವಾಸ ಕೈಗೊಂಡರು, ಜಿಲ್ಲಾಧ್ಯಕ್ಷರುಗಳ ಬದಲಾವಣೆ ಜನವರಿಯಲ್ಲಿ ನಡೆಯಿತು. ಉಪಾಧ್ಯಕ್ಷ, ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಮತ್ತಿ ಖಜಾಂಚಿ ಹುದ್ದೆಗಳಿಗೆ ಇನ್ನೂ ನೇಮಕವಾಗಿಲ್ಲ,


ಇದರ ಜೊತೆಗೆ ಮಹಿಳಾ ಮೋರ್ಚಾ, ಎಸ್ ಎಸ್ಸಿ ಎಸ್ ಟಿ ಮತ್ತು ಯುವ ಘಟಕಗಳಿಗೆ ಇನ್ನೂ ನೇಮಕವಾಗಿಲ್ಲ, ನೂರಕ್ಕೂ ಹೆಚ್ಚಿನ ಹುದ್ದೆಗಳಿಗೆ ಇನ್ನೂ ನೇಮಕವಾಗಿಲ್ಲ. ಹೊಸ ಪದಾಧಿಕಾರಿಗಳ ನೇಮಕದ ಪಟ್ಟಿಯನ್ನು ಹೈ ಕಮಾಂಡ್ ಗೆ ಕಳುಹಿಸಲಾಗಿದೆ, ಆದರೆ  ಇನ್ನೂ ಪಟ್ಟಿ ಅಂತಿಮವಾಗಿ ಬಂದಿಲ್ಲ.

ಇದೇ ವೇಳೆ ಕಾಂಗ್ರೆಸ್ ಹಿರಿಯ ನಾಯಕ ಡಿಕೆ ಶಿವಕುಮಾರ್  ಕೆಪಿಸಿಸಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ, ಜೂನ್ 7ರಂದು ಅಧಿಕಾರ ಸ್ವೀಕಾರ ,ಸಾಧ್ಯತೆಯಿದ್ದು, ಅದಾದ ನಂತರ ಪದಾದಿಕಾರಿಗಳ ನೇಮಕ ಆಗುವ ಸಾದ್ಯತೆಯಿದೆ ಎಂದು  ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT