ಸಂತೋಷ್ 
ರಾಜಕೀಯ

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಬಿಎಸ್ ವೈ ಮಾಜಿ ಆಪ್ತ ಸಹಾಯಕ ಸಂತೋಷ್ ನೇಮಕ

ಆಪರೇಷನ್‌ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಸಂಬಂಧಿ ಹಾಗೂ ಮಾಜಿ ಆಪ್ತ ಸಹಾಯಕ ಎನ್‌ಆರ್‌ ಸಂತೋಷ್‌ ಅವರನ್ನು ಮುಖ್ಯಮಂತ್ರಿಗಳ ನಾಲ್ಕನೇ  ರಾಜಕೀಯ ಕಾರ್ಯದರ್ಶಿಯಾಗಿ ಶನಿವಾರ ನೇಮಿಸಲಾಗಿದೆ. 

ಬೆಂಗಳೂರು: ಆಪರೇಷನ್‌ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಸಂಬಂಧಿ ಹಾಗೂ ಮಾಜಿ ಆಪ್ತ ಸಹಾಯಕ ಎನ್‌ಆರ್‌ ಸಂತೋಷ್‌ ಅವರನ್ನು ಮುಖ್ಯಮಂತ್ರಿಗಳ ನಾಲ್ಕನೇ  ರಾಜಕೀಯ ಕಾರ್ಯದರ್ಶಿಯಾಗಿ ಶನಿವಾರ ನೇಮಿಸಲಾಗಿದೆ. 

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಗ್ರಾಮದ ಎನ್ಆರ್ ಸಂತೋಷ್ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಸಿ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.

ಈಗಾಗಲೇ ಯಲಹಂಕ ಶಾಸಕ ಎಸ್ಆರ್ ವಿಶ್ವನಾಥ್, ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಮತ್ತು ಶಂಕರಗೌಡ ಪಾಟೀಲ್ ಅವರು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡಿದ್ದಾರೆ. ಇದೀಗ ನಾಲ್ಕನೇ ರಾಜಕೀಯ ಕಾರ್ಯದರ್ಶಿಯಾಗಿ ಸಂತೋಷ್‌ ನೇಮಕವಾಗಿದ್ದಾರೆ.

ಸಂತೋಷ್‌ ಅವರು ಹಲವು ವರ್ಷಗಳ ಕಾಲ ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದರು. ಸಂಬಂಧದಲ್ಲಿ ಇವರು ಯಡಿಯೂರಪ್ಪ ಸಹೋದರಿಯ ಮೊಮ್ಮಗನಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT