ಯಡಿಯೂರಪ್ಪ ಮತ್ತು ಅಮಿತ್ ಶಾ (ಸಂಗ್ರಹ ಚಿತ್ರ) 
ರಾಜಕೀಯ

ಬಂಡಾಯದ ವಿಚಾರ ನಮಗೆ ಬಿಡಿ, ಕೊರೋನಾ ಬಗ್ಗೆ ಗಮನ ಕೊಡಿ: ಸಿಎಂ ಯಡಿಯೂರಪ್ಪಗೆ 'ಶಾ' ಭರವಸೆ

ಭೋಜನ ಕೂಟದ ನೆಪದಲ್ಲಿ ವಿವಿಧ ಬೇಡಿಕೆಗಳನ್ನು ಇಟ್ಟುಗೊಂಡು ಬೆಳಗಾವಿಯ ಹಿರಿಯ ಶಾಸಕ ಉಮೇಶ್ ಕತ್ತಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿಯ ವಿವಿಧ ಶಾಸಕರು ನಡೆಸಿದ ಸಭೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದು, ಈ ಕುರಿತು ಹೆಚ್ಚು ತಲೆಕೆಡಿಸಿಕೊಳ್ಳದೆ, ಕೊರೋನಾ ವೈರಸ್ ಕುರಿತು ಗಮನಹರಿಸಿ...

ಬೆಂಗಳೂರು: ಭೋಜನ ಕೂಟದ ನೆಪದಲ್ಲಿ ವಿವಿಧ ಬೇಡಿಕೆಗಳನ್ನು ಇಟ್ಟುಗೊಂಡು ಬೆಳಗಾವಿಯ ಹಿರಿಯ ಶಾಸಕ ಉಮೇಶ್ ಕತ್ತಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿಯ ವಿವಿಧ ಶಾಸಕರು ನಡೆಸಿದ ಸಭೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದು, ಈ ಕುರಿತು ಹೆಚ್ಚು ತಲೆಕೆಡಿಸಿಕೊಳ್ಳದೆ, ಕೊರೋನಾ ವೈರಸ್ ಕುರಿತು ಗಮನಹರಿಸುವಂತೆ ಸೂಚನೆ ನೀಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಕಳೆದ ರಾತ್ರಿ ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿರುವ ಅಮಿತ್ ಶಾ ಅವರು, ಪಕ್ಷದ ವಿಚಾರವನ್ನು ನಮಗೆ ಬಿಡಿ. ಪ್ರಸ್ತುತ ರಾಜ್ಯದಲ್ಲಿ ಕೊರೋನಾ ವೈರಸ್ ನಿಗ್ರಹಿಸುವತ್ತ ಗಮನ ಹರಿಸುವಂತೆ ತಿಳಿಸಿದ್ದಾರೆಂದು ಹೇಳಲಾಗುತ್ತಿದೆ. 

ಪಕ್ಷದ ವಿಚಾರ ನಮಗೆ ಬಿಡಿ. ಇದೀ ದೇಶ ಕೊರೋನಾ ಸಂಕಷ್ಟವನ್ನು ಎದುರಿಸುತ್ತಿದೆ. ಕರ್ನಾಟಕ ಬಿಜೆಪಿ ಪಕ್ಷದಲ್ಲಿ ಉಂಟಾಗಿರುವ ಭಿನ್ನಮತವನ್ನು ನಾವು ನೋಡಿಕೊಳ್ಳುತ್ತೇವೆ. ಈ ವಿಚಾರದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ ಎಂದು ಅಭಯಹಸ್ತ ನೀಡಿದ್ದಾರೆಂದು ತಿಳಿದುಬಂದಿದೆ. 

ಇದರೊಂದಿಗೆ ಕೊರೋನಾ ಸಂಕಷ್ಟದಿಂದ ಉದ್ಭವಿಸಿರುವ ಪರಿಸ್ಥಿತಿ ನಿಭಾಯಿಸುವಲ್ಲಿ ನಿರತರಾಗಿರುವ ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರೀಯ ನಾಯಕರು ಸದಸ್ಯಕ್ಕೆ ರಾಜ್ಯದ ಶಾಸಕರ ಬೇಡಿಕೆಗಳ ಬೆದರಿಕೆಗೆ ಸೊಪ್ಪುವ ಹಾಕುವ ಸಾಧ್ಯತೆಗಳಿಲ್ಲ ಎಂಬುದನ್ನು ತೋರಿಸುತ್ತಿದೆ. 

ಈ ನಡುವೆ, ಈ ಎಲ್ಲಾ ಬೆಳವಣಿಗೆಗಳು ರಾಜ್ಯಸಭಾ ಚುನಾವಣೆ ಹಾಗೂ ವಿಧಾನಸಭೆಯಿಂದ ವಿಧಾನಪರಿಷತ್'ಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ನೀಡತೊಡಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Sonam Wangchuk Arrested: NSA ಅಡಿ ಕೇಸ್; ಜಾಮೀನು ಸಿಗುವ ಸಾಧ್ಯತೆಯೇ ಇಲ್ಲ!

'ಭಾರತ ಶತ್ರು ರಾಷ್ಟ್ರ.. Donald Trumpಗೆ ನೊಬೆಲ್ ಪ್ರಶಸ್ತಿ': ಪರಮಾಣು ಯುದ್ಧದ ಉಲ್ಲೇಖ ಮಾಡಿದ ಪಾಕ್ ಪ್ರಧಾನಿ Shehbaz Sharif!

Asia Cup 2025: Indian Army ಕುರಿತು ವ್ಯಂಗ್ಯ, ಪಾಕ್ ಕ್ರಿಕೆಟಿಗ Haris Rauf ಗೆ ಬರೆ ಹಾಕಿದ ICC, ದಂಡ, ಫರ್ಹಾನ್ ಗೂ ಎಚ್ಚರಿಕೆ!

ಜಾತಿ ಗಣತಿ: ಇಲ್ಲಿಯವರೆಗೆ ಕೇವಲ ಶೇ.2 ರಷ್ಟು ಪ್ರಗತಿ; ಪ್ರತಿದಿನ ಶೇ.10 ರಷ್ಟು ಸಮೀಕ್ಷೆಗೆ ಸಿಎಂ ಸೂಚನೆ; ಗಡುವಿನೊಳಗೆ ಪೂರ್ಣ!

ಸಿನಿಮಾ ಟಿಕೆಟ್, ಟಿವಿ ಚಾನಲ್ ಗಳ ಮೇಲೆ ಶೇ.2 ರಷ್ಟು ಸೆಸ್ ವಿಧಿಸಲು ರಾಜ್ಯ ಸರ್ಕಾರ ಮುಂದು: ಇದರ ಪರಿಣಾಮ ಏನು...?

SCROLL FOR NEXT