ಯಡಿಯೂರಪ್ಪ ಮತ್ತು ಅಮಿತ್ ಶಾ (ಸಂಗ್ರಹ ಚಿತ್ರ) 
ರಾಜಕೀಯ

ಬಂಡಾಯದ ವಿಚಾರ ನಮಗೆ ಬಿಡಿ, ಕೊರೋನಾ ಬಗ್ಗೆ ಗಮನ ಕೊಡಿ: ಸಿಎಂ ಯಡಿಯೂರಪ್ಪಗೆ 'ಶಾ' ಭರವಸೆ

ಭೋಜನ ಕೂಟದ ನೆಪದಲ್ಲಿ ವಿವಿಧ ಬೇಡಿಕೆಗಳನ್ನು ಇಟ್ಟುಗೊಂಡು ಬೆಳಗಾವಿಯ ಹಿರಿಯ ಶಾಸಕ ಉಮೇಶ್ ಕತ್ತಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿಯ ವಿವಿಧ ಶಾಸಕರು ನಡೆಸಿದ ಸಭೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದು, ಈ ಕುರಿತು ಹೆಚ್ಚು ತಲೆಕೆಡಿಸಿಕೊಳ್ಳದೆ, ಕೊರೋನಾ ವೈರಸ್ ಕುರಿತು ಗಮನಹರಿಸಿ...

ಬೆಂಗಳೂರು: ಭೋಜನ ಕೂಟದ ನೆಪದಲ್ಲಿ ವಿವಿಧ ಬೇಡಿಕೆಗಳನ್ನು ಇಟ್ಟುಗೊಂಡು ಬೆಳಗಾವಿಯ ಹಿರಿಯ ಶಾಸಕ ಉಮೇಶ್ ಕತ್ತಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿಯ ವಿವಿಧ ಶಾಸಕರು ನಡೆಸಿದ ಸಭೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದು, ಈ ಕುರಿತು ಹೆಚ್ಚು ತಲೆಕೆಡಿಸಿಕೊಳ್ಳದೆ, ಕೊರೋನಾ ವೈರಸ್ ಕುರಿತು ಗಮನಹರಿಸುವಂತೆ ಸೂಚನೆ ನೀಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಕಳೆದ ರಾತ್ರಿ ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿರುವ ಅಮಿತ್ ಶಾ ಅವರು, ಪಕ್ಷದ ವಿಚಾರವನ್ನು ನಮಗೆ ಬಿಡಿ. ಪ್ರಸ್ತುತ ರಾಜ್ಯದಲ್ಲಿ ಕೊರೋನಾ ವೈರಸ್ ನಿಗ್ರಹಿಸುವತ್ತ ಗಮನ ಹರಿಸುವಂತೆ ತಿಳಿಸಿದ್ದಾರೆಂದು ಹೇಳಲಾಗುತ್ತಿದೆ. 

ಪಕ್ಷದ ವಿಚಾರ ನಮಗೆ ಬಿಡಿ. ಇದೀ ದೇಶ ಕೊರೋನಾ ಸಂಕಷ್ಟವನ್ನು ಎದುರಿಸುತ್ತಿದೆ. ಕರ್ನಾಟಕ ಬಿಜೆಪಿ ಪಕ್ಷದಲ್ಲಿ ಉಂಟಾಗಿರುವ ಭಿನ್ನಮತವನ್ನು ನಾವು ನೋಡಿಕೊಳ್ಳುತ್ತೇವೆ. ಈ ವಿಚಾರದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ ಎಂದು ಅಭಯಹಸ್ತ ನೀಡಿದ್ದಾರೆಂದು ತಿಳಿದುಬಂದಿದೆ. 

ಇದರೊಂದಿಗೆ ಕೊರೋನಾ ಸಂಕಷ್ಟದಿಂದ ಉದ್ಭವಿಸಿರುವ ಪರಿಸ್ಥಿತಿ ನಿಭಾಯಿಸುವಲ್ಲಿ ನಿರತರಾಗಿರುವ ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರೀಯ ನಾಯಕರು ಸದಸ್ಯಕ್ಕೆ ರಾಜ್ಯದ ಶಾಸಕರ ಬೇಡಿಕೆಗಳ ಬೆದರಿಕೆಗೆ ಸೊಪ್ಪುವ ಹಾಕುವ ಸಾಧ್ಯತೆಗಳಿಲ್ಲ ಎಂಬುದನ್ನು ತೋರಿಸುತ್ತಿದೆ. 

ಈ ನಡುವೆ, ಈ ಎಲ್ಲಾ ಬೆಳವಣಿಗೆಗಳು ರಾಜ್ಯಸಭಾ ಚುನಾವಣೆ ಹಾಗೂ ವಿಧಾನಸಭೆಯಿಂದ ವಿಧಾನಪರಿಷತ್'ಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ನೀಡತೊಡಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Operation Sindoor ಬಳಿಕ ಪಂಜಾಬ್ ಅಸ್ಥಿರಗೊಳಿಸಲು ಪಾಕ್ proxy war; 'ಸಂಘಟಿತ ಅಪರಾಧ ಬೇರುಸಹಿತ ಕಿತ್ತೊಗೆಯುತ್ತೇವೆ'!

New year 2026: ನಗರದಾದ್ಯಂತ ಸಂಭ್ರಮಾಚರಣೆ: ಸಂಭ್ರಮದ ಮಧ್ಯೆ ಯುವಕರ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ!

UP: 2025 ರಲ್ಲಿ 2,500 ಕ್ಕೂ ಹೆಚ್ಚು ಎನ್‌ಕೌಂಟರ್‌; 48 ಸಾವು, 8 ವರ್ಷಗಳಲ್ಲಿ ಅತಿ ಹೆಚ್ಚು

ಭಾರತ-ಬಾಂಗ್ಲಾದೇಶ ಸಂಬಂಧಗಳಿಗೆ ಖಲೀದಾ ಜಿಯಾ ಕೊಡುಗೆ ನೀಡಿದ್ದಾರೆ: ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಪತ್ರ

'CEC ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ'; SIR ಕುರಿತು ನಮ್ಮ ಕಳವಳ ಪರಿಹರಿಸಿಲ್ಲ: ಅಭಿಷೇಕ್ ಬ್ಯಾನರ್ಜಿ

SCROLL FOR NEXT