ಸಿದ್ದರಾಮಯ್ಯ 
ರಾಜಕೀಯ

ಅತಿವೃಷ್ಠಿ, ಪ್ರವಾಹ ಪೀಡಿತರಿಗೆ ಪರಿಹಾರ ನೀಡಿಲ್ಲವೇಕೆ: ಉತ್ತರ ಕೊಡಿ ಬಿಎಸ್ ವೈ- ಸಿದ್ದರಾಮಯ್ಯ ಪ್ರಶ್ನೆ

ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲೂ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ. ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲ, ಬೊಕ್ಕಸ ಮಾತ್ರ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ 90,000 ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ.

ಬೆಂಗಳೂರು: ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲೂ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ. ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲ, ಬೊಕ್ಕಸ ಮಾತ್ರ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ 90,000 ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ. ಹಾಗಿದ್ದರೆ ದುಡ್ಡೆಲ್ಲಿ ಹೋಯಿತು? ಮುಖ್ಯಮಂತ್ರಿಗಳು ಮತ್ತು ಸಚಿವರ ಜೇಬಿಗೆ ಹೋಯಿತಾ? ಉತ್ತರ ಕೊಡಿ ಮುಖ್ಯಮಂತ್ರಿಗಳೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಸಂಬಂದ ಸರಣಿ ಟ್ವೀಟ್ ಮಾಡಿರುವ ಅವರು, ಕಳೆದ ವರ್ಷ ಸರ್ಕಾರ ನಡೆಸಿದ್ದ ಸಮೀಕ್ಷೆಯಂತೆ ನೆರೆಯಿಂದಾಗಿ ಹಾನಿಗೀಡಾದ ಮನೆಗಳು 2,24,000, ಪರಿಹಾರ ನೀಡಿರುವುದು ಮಾತ್ರ 1,24,000 ಮನೆಗಳಿಗೆ ಎಂದು ಕೇಂದ್ರಕ್ಕೆ ವರದಿ ಕಳಿಸಲಾಗಿದೆ. ಇನ್ನು ಈ ವರ್ಷದ ಮಳೆಗೆ ಹಾನಿಗೀಡಾಗಿರುವ ಮನೆಗಳಿಗೆ ಪರಿಹಾರ ಈ ಸರ್ಕಾರ ನೀಡುವುದು ಹೇಗೆ ಸಾಧ್ಯ? ಎಂದು ಕೇಳಿದ್ದಾರೆ.

ಕಳೆದ ವರ್ಷದ ಬೆಳೆ-ಮನೆ ಕಳೆದುಕೊಂಡವರಿಗೆ ಇನ್ನೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ, ಈ ವರ್ಷ ಸಮೀಕ್ಷೆಯನ್ನೇ ಮಾಡಿಲ್ಲ. ಮುಖ್ಯಮಂತ್ರಿಗಳು, ಸಚಿವರು ಚುನಾವಣಾ ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲೆಯ ಅಧಿಕಾರಿಗಳು ಮನೆಯಲ್ಲಿ ಹಾಯಾಗಿದ್ದಾರೆ. ಸಂತ್ರಸ್ತರು ಬೀದಿಯಲ್ಲಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. 

ಕಳೆದ ವರ್ಷದ ಅತಿವೃಷ್ಟಿ ಹಾನಿಗೆ ರಾಜ್ಯ ಸರ್ಕಾರ ಕೇಂದ್ರದಿಂದ ಕೇಳಿದ್ದು ರೂ.35,000 ಕೋಟಿ ಪರಿಹಾರ. ಆದರೆ ಅವರು ನೀಡಿದ್ದು ರೂ.1654 ಕೋಟಿ. ಈ ಬಾರಿ ರಾಜ್ಯ ಸರ್ಕಾರ ಈವರೆಗೆ ಕೇಳಿದ್ದು ರೂ.4000 ಕೋಟಿ. ಕೇಂದ್ರದಿಂದ ಪರಿಹಾರ ಕೇಳಲೂ ಭಯನಾ? ಎಂದು ಕಿಡಿಕಾರಿದ್ದಾರೆ. 

ಆಗಸ್ಟ್ ನಿಂದ ಮೂರು ತಿಂಗಳು ಸುರಿದ ಮಳೆಯಿಂದಾಗಿ 23 ಜಿಲ್ಲೆಗಳ 130 ತಾಲ್ಲೂಕುಗಳು ಬಾಧಿತವಾಗಿವೆ. ಕಳೆದ ವರ್ಷ ಹತ್ತು ಲಕ್ಷ ಹೆಕ್ಟೇರ್ ಕೃಷಿಭೂಮಿ ಹಾನಿಗೀಡಾಗಿದ್ದರೆ, ಈ ವರ್ಷ 11ಲಕ್ಷ ಹೆಕ್ಟೇರ್ ಭೂಮಿಯಲ್ಲಿ ರೈತರು ಬೆಳೆ ಕಳೆದುಕೊಂಡಿದ್ದಾರೆ. ಈ ದುಪ್ಪಟ್ಟು ನಷ್ಟದಿಂದ ರೈತರು ನೆಲಹಿಡಿದಿದ್ದಾರೆ ಎಂದು ಸರ್ಕಾರಕ್ಕೆ ಲೆಕ್ಕ ಕೇಳಿದ್ದಾರೆ.

ಸಿದ್ದರಾಮಯ್ಯ ಅವರು ಈ ಹಿಂದೆ ಆರಂಭಿಸಿದ ಲೆಕ್ಕಕೊಡಿ ಮುಖ್ಯಮಂತ್ರಿಗಳೇ ಅಭಿಯಾನಂದಂತೆ ಈ ಬಾರಿ ಉತ್ತರ ಕೊಡಿ ಅಭಿಯಾನಕ್ಕೂ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT