ಕುಸಿದು ಬಿದ್ದ ಅಮ್ಮಾಜಮ್ಮ 
ರಾಜಕೀಯ

ಶಿರಾ ಉಪಚುನಾವಣೆ: ವೇದಿಕೆಯಲ್ಲೇ ಕುಸಿದು ಬಿದ್ದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ

ಶಿರಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ವೇಳೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಬಹಿರಂಗ ಪ್ರಚಾರದ ವೇದಿಕೆಯಲ್ಲಿಯೇ ಕುಸಿದು ಬಿದ್ದ ಘಟನೆ ನಡೆಯಿತು.

ತುಮಕೂರು: ಶಿರಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ವೇಳೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಬಹಿರಂಗ ಪ್ರಚಾರದ ವೇದಿಕೆಯಲ್ಲಿಯೇ ಕುಸಿದು ಬಿದ್ದ ಘಟನೆ ನಡೆಯಿತು.

ಭಾನುವಾರ ಜೆಡಿಎಸ್ ಪಕ್ಷದ ಸಮಾವೇಶ ನಡೆಯುತ್ತಿದ್ದ ವೇದಿಕೆಯಲ್ಲೇ ಕುಸಿದು ಬಿದ್ದ ಅಭ್ಯರ್ಥಿ ಅಮ್ಮಾಜಮ್ಮ (60) ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊನೆ ದಿನದ ಬಹಿರಂಗ ಪ್ರಚಾರದ ಅಂಗವಾಗಿ ಸಮಾವೇಶ ಆಯೋಜನೆ ಮಾಡಲಾಗಿತ್ತು.

ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಅಮ್ಮಾಜಮ್ಮ ಸೆರಗೊಡ್ಡಿ, ನನಗೆ ರಾಜಕೀಯ ಗೊತ್ತಿಲ್ಲ. ರೈತರ ಕಷ್ಟ ತಿಳಿದಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುವುದು ನನ್ನ ಪತಿಯ ಕನಸಾಗಿತ್ತು. ಅದನ್ನು ನನಸು ಮಾಡಲು ಮತನೀಡಿ ಎಂದು ಕೇಳಿದರು.

ದೇವೇಗೌಡರು ಮಾತನಾಡುತ್ತಿದ್ದಾಗ, ಅಮ್ಮಾಜಮ್ಮ ಅವರು ಪಕ್ಕದಲ್ಲಿಯೇ ನಿಂತಿದ್ದರು. ಬೆಳಿಗ್ಗೆಯಿಂದಲೂ ನಡೆದ ರೋಡ್ ಶೋ, ಪ್ರಚಾರ ಸಭೆಗಳಲ್ಲಿ ಅವರು ನಿಂತುಕೊಂಡಿದ್ದರು. ಇದರಿಂದ ಬಳಲಿದ್ದರು.

ಐಬಿ ಸರ್ಕಲ್‌ನಿಂದ ರಾಮಚಂದ್ರಪ್ಪ ಬಯಲು ರಂಗಮಂದಿರದ ತನಕ ಬೃಹತ್ ಜಾಥಾ ನಡೆಸಲಾಗಿತ್ತು. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ಹಲವಾರು ನಾಯಕರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಸುಮಾರು 2 ಕಿಮೀ ವರೆಗೂ ಬಿಸಿಲಿನಲ್ಲಿ ಪ್ರಚಾರ ನಡೆಸಿದ ಕಾರಣ ಅಮ್ಮಾಜಮ್ಮ ಅಸ್ವಸ್ಥರಾದರು ಎಂದು ಹೇಳಲಾಗಿದೆ.

ಅಮ್ಮಾಜಮ್ಮ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದ ದಿನವೇ ಅವರಿಗೆ ಕೋವಿಡ್ ಸೋಂಕು ತಗುಲಿದ್ದು ಖಚಿತವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಮನೆಗೆ ತೆರಳಿದ ಅಮ್ಮಾಜಮ್ಮ ನನಗೆ ತಲೆ ಸುತ್ತು ಬಂದಿತ್ತು, ಇಗ ನಾನು ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಸಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಇರಾನ್ ಪ್ರತಿಭಟನೆಯಲ್ಲಿ 2000 ಜನ ಸಾವು; ಇದಕ್ಕೆ ಉಗ್ರರು ಕಾರಣ ಎಂದ ಅಧಿಕಾರಿಗಳು

ತುಮಕೂರು ಕ್ರೀಡಾಂಗಣದಿಂದ ಗಾಂಧಿ ಹೆಸರು ತೆರವು- ಬಿಜೆಪಿ ಆರೋಪ, ಜಿ ಪರಮೇಶ್ವರ ಪ್ರತಿಕ್ರಿಯೆ ಏನು?

Toxic Teaserನಲ್ಲಿ 'ಟೂ ಮಚ್ ಸೆಕ್ಸ್' ಇದೆಯೇ? CBFCಗೆ ಮತ್ತೊಂದು ದೂರು!

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

SCROLL FOR NEXT