ಪಿಪಿಇ ಕಿಟ್ ಧರಿಸಿರುವ ಮತದಾರ 
ರಾಜಕೀಯ

ಉಪ ಚುನಾವಣೆಗೆ ತೆರೆ: ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರ, ಆರ್ ಆರ್ ನಗರದಲ್ಲಿ ಕಡಿಮೆ, ಶಿರಾದಲ್ಲಿ ಹೆಚ್ಚು ಮತದಾನ

ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಮಂಗಳವಾರ ನಡೆದ ಮತದಾನ ಅಂತ್ಯವಾಗಿದ್ದು, ನಿರೀಕ್ಷೆಯಂತೆ ಆರ್ ಆರ್ ನಗರದಲ್ಲಿ ಅತಿ ಕಡಿಮೆ ಹಾಗೂ ಶಿರಾದಲ್ಲಿ ಹೆಚ್ಚು ಮತದಾನವಾಗಿದೆ.

ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಮಂಗಳವಾರ ನಡೆದ ಮತದಾನ ಅಂತ್ಯವಾಗಿದ್ದು, ನಿರೀಕ್ಷೆಯಂತೆ ಆರ್ ಆರ್ ನಗರದಲ್ಲಿ ಅತಿ ಕಡಿಮೆ ಹಾಗೂ ಶಿರಾದಲ್ಲಿ ಹೆಚ್ಚು ಮತದಾನವಾಗಿದೆ.

ಕೊರೋನಾ ಮುಂಜಾಗ್ರತೆಯೊಂದಿಗೆ ಇಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ಎರಡೂ ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ.

ಆರ್ ಆರ್ ನಗರದಲ್ಲಿ ಸಂಜೆ ಐದು ಗಂಟೆಯವರೆಗೆ 39.05 ರಷ್ಟು ಮತದಾನವಾಗಿದೆ. ತುಮಕೂರು ಜಿಲ್ಲೆಯ ಶಿರಾದಲ್ಲಿ ಕೊರೋನಾ ಹೊರತಾಗಿಯೂ ಬಿರುಸಿನ ಮತದಾನ ನಡೆದಿದ್ದು, ಸಂಜೆ ಐದು ಗಂಟೆಯವರೆಗೆ ಶೇ. 77.34 ರಷ್ಟು ಮತದಾನವಾಗಿದೆ.

ಆರ್​ಆರ್​ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಕುಸುಮಾ, ಬಿಜೆಪಿಯಿಂದ ಮುನಿರತ್ನ ಹಾಗೂ ಜೆಡಿಎಸ್​ನಿಂದ ಕೃಷ್ಣಮೂರ್ತಿ ಸ್ಪರ್ಧಿಸಿದ್ದರೆ. ಶಿರಾದಲ್ಲಿ ಕಾಂಗ್ರೆಸ್​ನಿಂದ ಟಿ.ಬಿ ಜಯಚಂದ್ರ, ಬಿಜೆಪಿಯಿಂದ ರಾಜೇಶ್ ಗೌಡ ಹಾಗೂ ಜೆಡಿಎಸ್ ನ ಅಮ್ಮಾಜಮ್ಮ ಅಭ್ಯರ್ಥಿಗಳಾಗಿದ್ದಾರೆ.

ಎರಡು ಕ್ಷೇತ್ರಗಳಿಂದ, ಒಟ್ಟು 1,008 ಬೂತ್ ಗಳನ್ನು ಸ್ಥಾಪಿಸಲಾಗಿತ್ತು. ಎಲ್ಲಾ ಬೂತ್ ಗಳಲ್ಲೂ ಥರ್ಮಲ್ ಸ್ಕ್ಯಾನರ್ ಮತ್ತು ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು. ಕೊರೋನಾ ಪಾಸಿಟಿವ್ ಇದ್ದವರು ಕೂಡ ಇಂದು ತಮ್ಮ ಹಕ್ಕು ಚಲಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT