ಪಿಪಿಇ ಕಿಟ್ ಧರಿಸಿರುವ ಮತದಾರ 
ರಾಜಕೀಯ

ಉಪ ಚುನಾವಣೆಗೆ ತೆರೆ: ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರ, ಆರ್ ಆರ್ ನಗರದಲ್ಲಿ ಕಡಿಮೆ, ಶಿರಾದಲ್ಲಿ ಹೆಚ್ಚು ಮತದಾನ

ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಮಂಗಳವಾರ ನಡೆದ ಮತದಾನ ಅಂತ್ಯವಾಗಿದ್ದು, ನಿರೀಕ್ಷೆಯಂತೆ ಆರ್ ಆರ್ ನಗರದಲ್ಲಿ ಅತಿ ಕಡಿಮೆ ಹಾಗೂ ಶಿರಾದಲ್ಲಿ ಹೆಚ್ಚು ಮತದಾನವಾಗಿದೆ.

ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಮಂಗಳವಾರ ನಡೆದ ಮತದಾನ ಅಂತ್ಯವಾಗಿದ್ದು, ನಿರೀಕ್ಷೆಯಂತೆ ಆರ್ ಆರ್ ನಗರದಲ್ಲಿ ಅತಿ ಕಡಿಮೆ ಹಾಗೂ ಶಿರಾದಲ್ಲಿ ಹೆಚ್ಚು ಮತದಾನವಾಗಿದೆ.

ಕೊರೋನಾ ಮುಂಜಾಗ್ರತೆಯೊಂದಿಗೆ ಇಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ಎರಡೂ ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ.

ಆರ್ ಆರ್ ನಗರದಲ್ಲಿ ಸಂಜೆ ಐದು ಗಂಟೆಯವರೆಗೆ 39.05 ರಷ್ಟು ಮತದಾನವಾಗಿದೆ. ತುಮಕೂರು ಜಿಲ್ಲೆಯ ಶಿರಾದಲ್ಲಿ ಕೊರೋನಾ ಹೊರತಾಗಿಯೂ ಬಿರುಸಿನ ಮತದಾನ ನಡೆದಿದ್ದು, ಸಂಜೆ ಐದು ಗಂಟೆಯವರೆಗೆ ಶೇ. 77.34 ರಷ್ಟು ಮತದಾನವಾಗಿದೆ.

ಆರ್​ಆರ್​ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಕುಸುಮಾ, ಬಿಜೆಪಿಯಿಂದ ಮುನಿರತ್ನ ಹಾಗೂ ಜೆಡಿಎಸ್​ನಿಂದ ಕೃಷ್ಣಮೂರ್ತಿ ಸ್ಪರ್ಧಿಸಿದ್ದರೆ. ಶಿರಾದಲ್ಲಿ ಕಾಂಗ್ರೆಸ್​ನಿಂದ ಟಿ.ಬಿ ಜಯಚಂದ್ರ, ಬಿಜೆಪಿಯಿಂದ ರಾಜೇಶ್ ಗೌಡ ಹಾಗೂ ಜೆಡಿಎಸ್ ನ ಅಮ್ಮಾಜಮ್ಮ ಅಭ್ಯರ್ಥಿಗಳಾಗಿದ್ದಾರೆ.

ಎರಡು ಕ್ಷೇತ್ರಗಳಿಂದ, ಒಟ್ಟು 1,008 ಬೂತ್ ಗಳನ್ನು ಸ್ಥಾಪಿಸಲಾಗಿತ್ತು. ಎಲ್ಲಾ ಬೂತ್ ಗಳಲ್ಲೂ ಥರ್ಮಲ್ ಸ್ಕ್ಯಾನರ್ ಮತ್ತು ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು. ಕೊರೋನಾ ಪಾಸಿಟಿವ್ ಇದ್ದವರು ಕೂಡ ಇಂದು ತಮ್ಮ ಹಕ್ಕು ಚಲಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT