ಪಿಪಿಇ ಕಿಟ್ ಧರಿಸಿರುವ ಮತದಾರ 
ರಾಜಕೀಯ

ಉಪ ಚುನಾವಣೆಗೆ ತೆರೆ: ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರ, ಆರ್ ಆರ್ ನಗರದಲ್ಲಿ ಕಡಿಮೆ, ಶಿರಾದಲ್ಲಿ ಹೆಚ್ಚು ಮತದಾನ

ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಮಂಗಳವಾರ ನಡೆದ ಮತದಾನ ಅಂತ್ಯವಾಗಿದ್ದು, ನಿರೀಕ್ಷೆಯಂತೆ ಆರ್ ಆರ್ ನಗರದಲ್ಲಿ ಅತಿ ಕಡಿಮೆ ಹಾಗೂ ಶಿರಾದಲ್ಲಿ ಹೆಚ್ಚು ಮತದಾನವಾಗಿದೆ.

ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಮಂಗಳವಾರ ನಡೆದ ಮತದಾನ ಅಂತ್ಯವಾಗಿದ್ದು, ನಿರೀಕ್ಷೆಯಂತೆ ಆರ್ ಆರ್ ನಗರದಲ್ಲಿ ಅತಿ ಕಡಿಮೆ ಹಾಗೂ ಶಿರಾದಲ್ಲಿ ಹೆಚ್ಚು ಮತದಾನವಾಗಿದೆ.

ಕೊರೋನಾ ಮುಂಜಾಗ್ರತೆಯೊಂದಿಗೆ ಇಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ಎರಡೂ ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ.

ಆರ್ ಆರ್ ನಗರದಲ್ಲಿ ಸಂಜೆ ಐದು ಗಂಟೆಯವರೆಗೆ 39.05 ರಷ್ಟು ಮತದಾನವಾಗಿದೆ. ತುಮಕೂರು ಜಿಲ್ಲೆಯ ಶಿರಾದಲ್ಲಿ ಕೊರೋನಾ ಹೊರತಾಗಿಯೂ ಬಿರುಸಿನ ಮತದಾನ ನಡೆದಿದ್ದು, ಸಂಜೆ ಐದು ಗಂಟೆಯವರೆಗೆ ಶೇ. 77.34 ರಷ್ಟು ಮತದಾನವಾಗಿದೆ.

ಆರ್​ಆರ್​ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಕುಸುಮಾ, ಬಿಜೆಪಿಯಿಂದ ಮುನಿರತ್ನ ಹಾಗೂ ಜೆಡಿಎಸ್​ನಿಂದ ಕೃಷ್ಣಮೂರ್ತಿ ಸ್ಪರ್ಧಿಸಿದ್ದರೆ. ಶಿರಾದಲ್ಲಿ ಕಾಂಗ್ರೆಸ್​ನಿಂದ ಟಿ.ಬಿ ಜಯಚಂದ್ರ, ಬಿಜೆಪಿಯಿಂದ ರಾಜೇಶ್ ಗೌಡ ಹಾಗೂ ಜೆಡಿಎಸ್ ನ ಅಮ್ಮಾಜಮ್ಮ ಅಭ್ಯರ್ಥಿಗಳಾಗಿದ್ದಾರೆ.

ಎರಡು ಕ್ಷೇತ್ರಗಳಿಂದ, ಒಟ್ಟು 1,008 ಬೂತ್ ಗಳನ್ನು ಸ್ಥಾಪಿಸಲಾಗಿತ್ತು. ಎಲ್ಲಾ ಬೂತ್ ಗಳಲ್ಲೂ ಥರ್ಮಲ್ ಸ್ಕ್ಯಾನರ್ ಮತ್ತು ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು. ಕೊರೋನಾ ಪಾಸಿಟಿವ್ ಇದ್ದವರು ಕೂಡ ಇಂದು ತಮ್ಮ ಹಕ್ಕು ಚಲಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT