ಮುನಿರತ್ನ 
ರಾಜಕೀಯ

ಫಲಿತಾಂಶಕ್ಕೂ ಮುನ್ನವೇ ಪ್ರಬಲ ಖಾತೆಗೆ ಮುನಿರತ್ನ ಲಾಬಿ: ಇಂಧನ ಖಾತೆ ಮೇಲೆ ಕಣ್ಣು!

ಉಪಚುನಾವಣಾ ಫಲಿತಾಂಶ ಇನ್ನೂ ಪ್ರಕಟವಾಗಬೇಕಿದೆ, ಆದರೆ ಬಿಜೆಪಿ ಆರ್ ಆರ್ ನಗರ ಅಭ್ಯರ್ಥಿ ಮುನಿರತ್ನ ಪ್ರಬಲ ಖಾತೆಗಾಗಿ ಲಾಬಿ ಆರಂಭಿಸಿದ್ದಾರೆ.

ಬೆಂಗಳೂರು: ಉಪಚುನಾವಣಾ ಫಲಿತಾಂಶ ಇನ್ನೂ ಪ್ರಕಟವಾಗಬೇಕಿದೆ, ಆದರೆ ಬಿಜೆಪಿ ಆರ್ ಆರ್ ನಗರ ಅಭ್ಯರ್ಥಿ ಮುನಿರತ್ನ ಪ್ರಬಲ ಖಾತೆಗಾಗಿ ಲಾಬಿ ಆರಂಭಿಸಿದ್ದಾರೆ.

ನವೆಂಬರ್ 3 ರಂದು ನಡೆದ ಉಪಚುನಾವಣೆ ಫಲಿತಾಂಶ ನವೆಂಬರ್ 10 ರಂದು ಪ್ರಕಟವಾಗಲಿದೆ, ಇತ್ತೀಚೆಗೆ ಆರ್ ಆರ್ ನಗರ ಚುನಾವಣಾ ಪ್ರಚಾರದ ವೇಳೆ ಸಿಎಂ ಯಡಿಯೂರಪ್ಪ ಮುನಿರತ್ನ ಅವರನ್ನು ಮಂತ್ರಿಯಾಗಿ ಮಾಡುವುದಾಗಿ ಘೋಷಿಸಿದರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದ 17 ಶಾಸಕರಲ್ಲಿ ಮುನಿರತ್ನ ಕೂಡ ಒಬ್ಬರಾಗಿದ್ದಾರೆ.

ಇರುವ ಒಟ್ಟು 34 ಖಾತೆಗಳಲ್ಲಿ ಆರು ಪ್ರಮುಖ ಖಾತೆ ಸಿಎಂ ಯಡಿಯೂರಪ್ಪ ಬಳಿಯಿದೆ, ಹಣಕಾಸು, ಇಂಧನ ಮತ್ತು ಬೆಂಗಳೂರು ನಗರಾಭಿವೃದ್ಧಿ ಇದರಲ್ಲಿ ಸೇರಿವೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ನಾನು ಕಾರಣರಾಗಿದ್ದೇವೆ, ಯಡಿಯೂರಪ್ಪ ಭರವಸೆ ನೀಡಿದ್ದಾರೆ, ನನಗೆ ಮಂತ್ರಿ ಸ್ಥಾನ ನೀಡುತ್ತಾರೆ ಎಂದು ಮುನಿರತ್ನ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಾನು ಕಾಂಗ್ರೆಸ್ ತೊರೆದಾಗ ಹಲವರು ನಾನು ಇಂಧನ ಸಚಿವನಾಗಬೇಕೆಂದು ಹಾರೈಸಿದರು ಎಂದು ಮುನಿರತ್ನ ತಿಳಿಸಿದ್ದಾರೆ. ಆದರೆ ಮುನಿರತ್ನ ಜೊತೆ ಕಾಂಗ್ರೆಸ್ ತೊರೆದ ರಮೇಶ್ ಜಾರಕಿಹೊಳಿ ಕೂಡ ಇಂಧನ ಖಾತೆ ಮೇಲೆ ಕಣ್ಣಿಟ್ಟಿದ್ದರು, ಆದರೆ ಬಳಿಕ ಅವರಿಗೆ ಜಲ ಸಂಪನ್ಮೂಲ ಖಾತೆ ನೀಡಲಾಯಿತು. 

ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಸಿಎಂ ಮತ್ತು ಪಕ್ಷದ ವರಿಷ್ಠರು ಭರವಸೆ ನೀಡಿದ್ದಾರೆ, ಆದರೆ ಯಾವ ಖಾತೆ ನೀಡಲಿದ್ದಾರೆ ಎಂಬುದು ಸಿಎಂ ಗೆ ಬಿಟ್ಟ ವಿಷಯವಾಗಿದೆ, ಇಂಥದ್ದೆ ಖಾತೆ ಬೇಕೆಂದು ಮುನಿರತ್ನ ಬೇಡಿಕೆ ಇಟ್ಟಿಲ್ಲ ಎಂದು ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ.

ಆದರೆ ಮುನಿರತ್ನ ಇಂಧನ ಖಾತೆಗಾಗಿ ಲಾಬಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ,  ಮತ್ತೊಂದೆಡೆ ಬಿಜೆಪಿ ನಿಷ್ಟಾವಂತ ಶಾಸಕರು ಇದೇ ಖಾತೆ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ, ನಿಷ್ಠರನ್ನು ಕಡೆಗಣಿಸುವುದು ಸಿಎಂಗೆ ಇಷ್ಟವಿಲ್ಲ, ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಇದೊಂದು ಕಠಿಣ ಸವಾಲಾಗಿದ್ದು, ದೆಹಲಿ ನಾಯಕರ ಜೊತೆ ಚರ್ಚಿಸಲು ಕಾಯುತ್ತಿದ್ದಾರೆ ಎಂದು ವಿಶ್ವಸಾರ್ಹ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT