ರಾಜಕೀಯ

ಉಪಚುನಾವಣೆ ಫಲಿತಾಂಶ: ದೇವೇಗೌಡ, ವಿಜಯೇಂದ್ರ, ಡಿಕೆ ಶಿವಕುಮಾರ್ ಸಾಮರ್ಥ್ಯಕ್ಕೆ ಸತ್ವ ಪರೀಕ್ಷೆ!

ನವೆಂಬರ್ 3 ರಂದು ನಡೆದ ಶಿರಾ ಮತ್ತು ಆರ್ ಆರ್ ನಗರ ಉಪಚುನಾವಣೆ ಫಲಿತಾಂಶ ಇಂದು ಹೊರ ಬೀಳಲಿದೆ. ಮೂರು ಪಕ್ಷಗಳ ಅಭ್ಯರ್ಥಿಗಳ ಹಣೆ ಬರಹ ಇಂದು ನಿರ್ಧಾರವಾಗಲಿದೆ. 

ತುಮಕೂರು: ನವೆಂಬರ್ 3 ರಂದು ನಡೆದ ಶಿರಾ ಮತ್ತು ಆರ್ ಆರ್ ನಗರ ಉಪಚುನಾವಣೆ ಫಲಿತಾಂಶ ಇಂದು ಹೊರ ಬೀಳಲಿದೆ. ಮೂರು ಪಕ್ಷಗಳ ಅಭ್ಯರ್ಥಿಗಳ ಹಣೆ ಬರಹ ಇಂದು ನಿರ್ಧಾರವಾಗಲಿದೆ. 

ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು, ಸಿಎಂ ಬಿಎಸ್ ವೈ ಪುತ್ರ ವಿಜಯೇಂದ್ರ, ಮಾಜಿ ಪಿಎಂ ಎಚ್ ಡಿ ದೇವೇಗೌಡ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶಿರಾ ಉಪ ಚುನಾವಣೆಗಾಗಿ ಇಲ್ಲಿಯೇ ಬೀಡು ಬಿಟ್ಟಿದ್ದು ಫಲಿತಾಂಶದಿಂದ ಸಾಮರ್ಥ್ಯ ಹೊರಬೀಳಲಿದೆ.

ಜೆಡಿಎಸ್ ಗೆ ಇದು ಅಸ್ಥಿತ್ವದ ಪ್ರಶ್ನೆಯಾಗಿದೆ ಎಂದು ಪಕ್ಷದ ಕಾರ್ಯಕರ್ತ ಗೊಮರಾಡಹಳ್ಳಿ ಮಂಜುನಾಥ್ ತಿಳಿಸಿದ್ದಾರೆ, ಇನ್ನೂ ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ ಬೆಂಬಲಿಗರು ಹೊನ್ನಾದೇವಿ ದೇವಾಲಯಕ್ಕೆ ಬೇಟಿ ನೀಡಿ ಪೂಜೆ ಸಲ್ಲಿಸಿದರು.  10 ಸಾವಿರ ಮತಗಳ ಅಂತರದಿಂದ ಜಯಚಂದ್ರ ಗೆಲುವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಕೆಎನ್ ರಾಜಣ್ಣ ತಿಳಿಸಿದ್ದಾರೆ. 

ಸಿದ್ದರಾಮಯ್ಯ ಮತ್ತು ದೇವೇಗೌಡ ತಮ್ಮ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದ್ದರು. ಪಕ್ಷವು ಸುಮಾರು 30,000 ಮತಗಳ ಗೌರವಾನ್ವಿತ ಮತವನ್ನು ಗಳಿಸಲಿದೆ ”ಎಂದು 2004 ರಲ್ಲಿ ಜೆಡಿಎಸ್ ಟಿಕೆಟ್‌ನಲ್ಲಿ ಬೆಲ್ಲಾವಿ ಸ್ಥಾನವನ್ನು ಗೆದ್ದ ರಾಜಣ್ಣ ಭವಿಷ್ಯ ನುಡಿದಿದ್ದಾರೆ.

ಬಿಜೆಪಿಯೂ ತನ್ನ ಅಭ್ಯರ್ಥಿ ಡಾ ಸಿ ಎಂ ರಾಜೇಶ್ ಗೌಡರ ಗೆಲುವಿನ ಬಗ್ಗೆ ಖಚಿತವಾಗಿದೆ. ವಿಜಯೇಂದ್ರ ಸೋಮವಾರ ಪಟ್ಟಣದಲ್ಲಿದ್ದರು ಕಳ್ಳಂಬೆಳ್ಳ ಗ್ರಾಮದಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವನ್ನಪ್ಪಿದ ಬಿಜೆಪಿ ಕಾರ್ಯಕರ್ತ ತಿಪ್ಪೆಸ್ವಾಮಿ ಅವರ ಕುಟುಂಬವನ್ನು ಭೇಟಿಯಾಗಿ ವಿಜಯೇಂದ್ರ ಸಾಂತ್ವನ ಹೇಳಿದರು. ಪಕ್ಷದ ಅಭ್ಯರ್ಥಿ ಅಮ್ಮಾಜಮ್ಮ ಎಣಿಕೆ ಕೇಂದ್ರಕ್ಕೆ ಹಾಜರಾಗದಿರಬಹುದು ಎಂದು ಜೆಡಿಎಸ್ ಮೂಲಗಳು ತಿಳಿಸಿವೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT