ಶ್ರೀರಾಮುಲು 
ರಾಜಕೀಯ

ವಿಜಯೇಂದ್ರ ನಮ್ಮ ಪಕ್ಷಕ್ಕೆ ದೊಡ್ಡ ಬಾಹುಬಲ: ಸಚಿವ ಶ್ರೀರಾಮುಲು

ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ಹೋದಲ್ಲೆಲ್ಲಾ ಬಿಜೆಪಿಗೆ ಗೆಲುವಾಗಲಿದೆ ಎಂದು ಈ ಮೊದಲೇ ಹೇಳಿದಂತೆ ಶಿರಾದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ವಿಜಯೇಂದ್ರ ನಮ್ಮ ಪಕ್ಷಕ್ಕೆ ದೊಡ್ಡ ಬಾಹುಬಲವಿದ್ದಂತೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ಹೋದಲ್ಲೆಲ್ಲಾ ಬಿಜೆಪಿಗೆ ಗೆಲುವಾಗಲಿದೆ ಎಂದು ಈ ಮೊದಲೇ ಹೇಳಿದಂತೆ ಶಿರಾದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ವಿಜಯೇಂದ್ರ ನಮ್ಮ ಪಕ್ಷಕ್ಕೆ ದೊಡ್ಡ ಬಾಹುಬಲವಿದ್ದಂತೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಶಿರಾದಲ್ಲಿ ಪಕ್ಷ ಗೆಲ್ಲಲು ವಿಜಯೇಂದ್ರ ಕೆಲಸ ಮಾಡಿದ್ದಾರೆ. ಹಾಗೆಯೇ ಆರ್.ಆರ್.ನಗರದಲ್ಲಿಯೂ ಬಿಜೆಪಿ ಗೆದ್ದಿದೆ. ಜನರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಲೆ ಪ್ರೀತಿ, ವಿಶ್ವಾಸ ಇಟ್ಟಿದ್ದಾರೆ. ಬಿಜೆಪಿಯನ್ನು ಬೆಂಬಲಿಸಿದ ಎರಡೂ ಕ್ಷೇತ್ರಗಳ ಜನತೆಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಕಾಂಗ್ರೆಸ್ ನಾಯಕರನ್ನು ಕುಟುಕಿದ ಶ್ರೀರಾಮುಲು, ಕಾಂಗ್ರೆಸ್ ನವರಿಗೆ ಬೇರೇನೂ ನೆಪ ಇಲ್ಲ. ಮಾತನಾಡಬಾರದ್ದನ್ನೆಲ್ಲಾ ಮಾತನಾಡಿದ್ದಾರೆ. ಉಪಚುನಾವಣೆ ಬಳಿಕ ಸರ್ಕಾರ ಅಸ್ಥಿರಗೊಳ್ಳಲಿದೆ ಎಂದಿದ್ದರು. ಮುಖ್ಯಮಂತ್ರಿ ಕುರ್ಚಿ ಮ್ಯೂಸಿಕಲ್ ಚೇರ್ ತರಹ ಎಂದಿದ್ದರು. ಉಪಚುನಾವಣೆಯ ಫಲಿತಾಂಶದಿಂದ ಕಾಂಗ್ರೆಸ್ ನವರಿಗೆ ಉತ್ತರ ಸಿಕ್ಕಿದೆ. ಕಾಂಗ್ರೆಸ್ ಗೆದ್ದರೆ ಯಾವುದೇ ಸಮಸ್ಯೆ ಹೇಳುವುದಿಲ್ಲ. ಅದೇ ಸೋತರೆ ಇವಿಎಂ ಯಂತ್ರದ ಮೇಲೆ ಅನುಮಾನ ವ್ಯಕ್ತಪಡಿಸುತ್ತಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT