ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 
ರಾಜಕೀಯ

ಕಾಂಗ್ರೆಸ್-ಜೆಡಿಎಸ್ ಭದ್ರಕೋಟೆ ಛಿದ್ರ: ಶಿರಾದಲ್ಲಿ ಮೊದಲ ಬಾರಿಗೆ ಅರಳಿದ ಕಮಲ

ಶಿರಾ ಉಪ ಚುನಾವಣೆಯಲ್ಲಿ ಡಾ.ರಾಜೇಶ್ ಗೌಡ ಗೆಲ್ಲುವ ಮೂಲಕ ಬಿಜೆಪಿ ಹೊಸ ಇತಿಹಾಸ ಸೃಷ್ಟಿಸಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನ ಸಾಂಪ್ರಾದಾಯಿಕ ಭದ್ರಕೋಟೆಯಾಗಿರುವ ಶಿರಾದಲ್ಲಿ ಮೊಟ್ಟ ಮೊದಲ ಬಾರಿಗೆ ಕಮಲ ಅರಳಿದೆ,

ತುಮಕೂರು: ಶಿರಾ ಉಪ ಚುನಾವಣೆಯಲ್ಲಿ ಡಾ.ರಾಜೇಶ್ ಗೌಡ ಗೆಲ್ಲುವ ಮೂಲಕ ಬಿಜೆಪಿ ಹೊಸ ಇತಿಹಾಸ ಸೃಷ್ಟಿಸಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನ ಸಾಂಪ್ರಾದಾಯಿಕ ಭದ್ರಕೋಟೆಯಾಗಿರುವ ಶಿರಾದಲ್ಲಿ ಮೊಟ್ಟ ಮೊದಲ ಬಾರಿಗೆ ಕಮಲ ಅರಳಿದೆ,

1951 ರಿಂದ ಇಲ್ಲಿಯವರೆಗೂ ನಡೆದ ಚುನಾವಣೆಗಳಲ್ಲಿ ಮೂರು ಬಾರಿ ಹೊರತು ಪಡಿಸಿದರೇ ಉಳಿದಂತೆ ಉಳಿದೆಲ್ಲಾ ಸಮದಲ್ಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಗೆಲುವು ಸಾಧಿಸಿವೆ.

2018ರ ಚುನಾವಣೆಯಲ್ಲಿ 74,338 ಮತ ಪಡೆದಿದ್ದ ಜೆಡಿಎಸ್ ಈ ಬಾರಿ ಕೇವಲ 35,982 ಮತ ಪಡೆದಿದೆ. ಅನುಕಂಪದ ಅಲೆ ಕೆಲಸ ಮಾಡುತ್ತದೆ ಎಂಬ ಕಾರಣಕ್ಕೆ ದಿವಂಗತ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ ಈ ಪ್ಲಾನ್ ಫಲಿಸಲಿಲ್ಲ, 

ಅಮ್ಮಾಜಮ್ಮಾ ಪರವಾಗಿ ಜೆಡಿಎಸ್ ಮುಖಂಡರಾದ ಎಚ್.ಡಿ ದೇವೇಗೌಡ, ಕುಮಾರಸ್ವಾಮಿ, ಪುತ್ರ ನಿಖಿಲ್, ಮಾಜಿ ಸಚಿವ ರೇವಣ್ಣ, ಸಂಸದ ಪ್ರಜ್ವಲ್ ಭಾರೀ ಪ್ರಚಾರ ನಡೆಸಿದ್ದರು.

ಜೆಡಿಎಸ್ ಕಳೆದುಕೊಂಡಿದ್ದನ್ನು ಬಿಜೆಪಿ ಗಳಿಸಿಕೊಂಡಿತ್ತು.  2018 ರ ಚುನಾವಣೆಯಲ್ಲಿ ರನ್ನರ್ ಅಪ್ ಆಗಿದ್ದ ಮತ್ತು 63,973 ಮತಗಳನ್ನು ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಅವರು ಈ ಬಾರಿಯೂ 61,673 ಮತಗಳನ್ನು ಗಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT