ಸಂಗ್ರಹ ಚಿತ್ರ 
ರಾಜಕೀಯ

ಆಗ್ನೇಯ ಪದವೀಧರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಚಿದಾನಂದ ಗೌಡಗೆ ಗೆಲುವು

ಆಗ್ನೇಯ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಚಿದಾನಂದ ಗೌಡ ಅವರು ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ಆಗ್ನೇಯ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಚಿದಾನಂದ ಗೌಡ ಅವರು ಗೆಲುವು ಸಾಧಿಸಿದ್ದಾರೆ.
 
ಇಂದು ನಡೆದ ಮತ ಎಣಿಕೆಯಲ್ಲಿ ಚಿದಾನಂದ ಗೌಡ ಅವರು 24,217 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಸೋಲಿಸಿದ್ದಾರೆ. 

ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೋಲಾರ, ಚಿಕ್ಕಬಳ್ಳಾಪು ಜಿಲ್ಲೆಗಳನ್ನೊಳಗೊಂಡ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಅ.28ರಂದು ಮತದಾನ ನಡೆದಿತ್ತು. ನವೆಂಬರ್ 2ರಂದೇ ನಡೆಯಬೇಕಿದ್ದ ಮತ ಎಣಿಕೆಯನ್ನು ನವೆಂಬರ್ 10ಕ್ಕೆ ಚುನಾವಣಾ ಆಯೋಗ ಮುಂದೂಡಿತ್ತು. 

ನಿನ್ನೆ ಆಗ್ನೇಯ ಪದವೀಧದರ ಕ್ಷೇತ್ರದ ಚುನಾವಣೆಯ ಮತಎಣಿಕೆ ಪ್ರಕ್ರಿಯೆಯು ತಡವಾಗಿ ಆರಂಭವಾದ ಕಾರಣ ಇಂದು ಬೆಳಿಗ್ಗೆ ಮತ್ತೆ ಮತಎಣಿಕೆ ಪ್ರಕ್ರಿಯೆಯನ್ನು ಮುಂದುವರೆಸಲಾಗಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಚಿದಾನಂದ ಅವರು ಗೆಲುವು ಸಾಧಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

LPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ. ನೆರವು - ಸರ್ಕಾರಕ್ಕೆ ಆಕ್ಷನ್‌ ಪ್ರಿನ್ಸ್‌ ಹೇಳಿದ್ದೇನು?

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

SIR ಗೆ ಆಕ್ಷೇಪ; ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

SCROLL FOR NEXT