ರಮೇಶ್ ಜಾರಕಿಹೊಳಿ 
ರಾಜಕೀಯ

ಸಂಪುಟ ಕಸರತ್ತು: ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಶುರುವಾಯ್ತು ಗುಂಪು ಸಭೆ!

ಸಂಪುಟ ಪುನಾರಚನೆ ಮಾಡುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ಬೆನ್ನಲ್ಲೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಬುಧವಾರ ಶಾಸಕರು ಗುಂಪು ಸಭೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.

ಬೆಂಗಳೂರು: ಸಂಪುಟ ಪುನಾರಚನೆ ಮಾಡುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ಬೆನ್ನಲ್ಲೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಬುಧವಾರ ಶಾಸಕರು ಗುಂಪು ಸಭೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. 

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತರಾಗಿರುವ ರೇಣುಕಾರಾರ್ಯ ಅವರ ನೇತೃತ್ವದಲ್ಲಿ ಈ ಗುಂಪು ಸಭೆ ನಡೆದಿದ್ದು, ಸಭೆಯಲ್ಲಿ ರಾಜು ಗೌಡ, ಪ್ರತಾಪ್ ಗೌಡ ಪಾಟೀಲ್, ಹೆಚ್.ವಿಶ್ವನಾಥ್, ಬೆಳ್ಳಿ ಪ್ರಕಾಶ್, ಪೂರ್ಣಿಮಾ ಅವರು ಪಾಲ್ಗೊಂಡಿದ್ದರು ಎಂದು ಹೇಳಲಾಗುತ್ತಿದೆ. 

ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಎಂಟಿಬಿ ನಾಗರಾಜ್, ಹೆಚ್. ವಿಶ್ವನಾಥ್ ಹಾಗೂ ಆರ್.ಶಂಕರ್ ಅವರಿಗೆ ಸಚಿವ ಸ್ಥಾನ ನೀಡಲು ಯಡಿಯೂರಪ್ಪ ಅವರು ನಿರ್ಧರಿಸಿದ್ದಾರೆಂದು ಹೇಳಲಾಗುತ್ತಿದೆ. 

ಈ ಹಿಂದೆ ಉಪಚುನಾವಣೆಗೂ ಮುನ್ನ ಪ್ರಚಾರದಲ್ಲಿ ಹೇಳಿಕೆ ನೀಡಿದ್ದ ಸಿಎಂ ಯಡಿಯೂರಪ್ಪ ಅವರು, ರಾಜರಾಜೇಶ್ವರಿ ನ ಗರದಲ್ಲಿ ಗೆಲುವು ಸಾಧಿಸಿದ್ದೇ ಆದರೆ, ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡವುದಾಗಿ ಹೇಳಿದ್ದರು. ಇದೀಗ ಪಟ್ಟಿಯಲ್ಲಿ ರಾಜುಗೌಡ, ಪೂರ್ಣಿಮಾ, ರೇಣುಕಾಚಾರ್ಯ ಹಾಗೂ ಸಿಪಿ ಯೋಗೇಶ್ವರ್ ಕೂಡ ಇದ್ದಾರೆಂದು ಹೇಳಲಾಗುತ್ತಿದೆ. 

ಈ ನಡುವೆ ಹೇಳಿಕೆ ನೀಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಅವರು, ನನಗೆ ಸಚಿವ ಸ್ಥಾನ ಬೇಕಿಲ್ಲ. ನವೆಂಬರ್ 25 ಬಳಿಕ ನಾನು ಮಾತನಾಡುತ್ತೇನೆ. ಬದಲಾವಣೆಗಾಗಿ ಕಾಯುತ್ತಿದ್ದೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT