ಕುಮಾರಸ್ವಾಮಿ ಮತ್ತು ಯಡಿಯೂರಪ್ಪ 
ರಾಜಕೀಯ

ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ಬಿಎಸ್ ವೈ- ಕುಮಾರಸ್ವಾಮಿ ಭೇಟಿ: ಕುತೂಹಲ ಕೆರಳಿಸಿದ ಚರ್ಚೆ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಶುಕ್ರವಾರ ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. 

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಶುಕ್ರವಾರ ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. 

ಸೆಪ್ಟೆಂಬರ್‌ನಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲೆ ಸಿಎಂ ಬಿಎಸ್‌ವೈ ಅವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಉಭಯರ ನಡುವೆ ಮಾತುಕತೆ ನಡೆದಿತ್ತು. ಅಧಿವೇಶನ ನಡೆಯುವಾಗ ವಿಧಾನಸೌಧದ ಸಿಎಂ ಕೊಠಡಿಯಲ್ಲೂ ಇಬ್ಬರು ನಾಯಕರು ಮುಖಾಮುಖಿಯಾಗಿದ್ದರು.

ಉಪಚುನಾವಣೆ ಬಳಿಕ ಇಬ್ಬರು ನಾಯಕರ ಮುಖಾಮುಖಿಯಾಗಿದ್ದು, ಜತೆಗೆ ಮೇಲುಕೋಟೆ ಶಾಸಕ ಸಿ.ಎಸ್‌.ಪುಟ್ಟರಾಜು ಜತೆಗಿದ್ದರು. ಇಬ್ಬರೂ ನಾಯಕರು ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT