ರಾಜಕೀಯ

ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆ: ಬಿಜೆಪಿಯ ಉಮೇಶ್ ಅಧ್ಯಕ್ಷ, ಜೆಡಿಎಸ್ ನ ಅಶೋಕ್ ಉಪಾಧ್ಯಕ್ಷರಾಗಿ ಆಯ್ಕೆ

Raghavendra Adiga

ಮಂಡ್ಯ: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನದ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡ ಬಿಜೆಪಿಗೆ ಅಧ್ಯಕ್ಷ ಸ್ಥಾನ ಒಲಿದಿದ್ದರೆ ಬಹುಮತವಿದ್ದೂ ಕಾಂಗ್ರೆಸ್ ಸೋಲುವಂತಾಗಿದೆ.

ಬಿಜೆಪಿ ಅಭ್ಯರ್ಥಿ ಸಿ.ಪಿ.ಉಮೇಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೆ ಜೆಡಿಎಸ್‌ ನ ಅಶೋಕ್ ಉಪಾದ್ಯಕ್ಷರಾಗಿ ಚುನಾಯಿತರಾದರು.

ಕಾಂಗ್ರೆಸ್ ಅನ್ನು ಅಧಿಕಾರದಿಂದ ದೂರವಿಡಲು ಜೆಡಿಎಸ್ ಬಿಜೆಪಿ ಜತೆಯಾಗಿ ರೂಪಿಸಿದ ತಂತ್ರ ಯಶಸ್ವಿಯಾಗಿದೆ. ಇದೀಗ ಎರಡೂ ಪಕ್ಷಗಳ ಮತದಾರರ ಅನುಮೋದನೆಯ ಮೇರೆಗೆ ಬಿಜೆಪಿ ಅಭ್ಯರ್ಥಿಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ.

SCROLL FOR NEXT