ರಾಜಕೀಯ

ಸಚಿವ ಸ್ಥಾನಕ್ಕಾಗಿ ಶಾಸಕರು ಲಾಬಿ ನಡೆಸುವುದರಲ್ಲಿ ಯಾವ ತಪ್ಪೂ ಇಲ್ಲ: ಸಚಿವ ಎಸ್.ಟಿ. ಸೋಮಶೇಖರ್

Manjula VN

ಬೆಳಗಾವಿ: ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವುದರಲ್ಲಿ ಯಾವ ತಪ್ಪೂ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಹೇಳಿದ್ದಾರೆ. 

ಬೆಳಗಾವಿಯಲ್ಲಿ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿ ಅವರು, ಜನರಪರ ಕೆಲಸಗಳಿಗೆ ಸಹಾಯವಾಗುತ್ತದೆ ಎಂದು ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುವುದು ಸಾಮಾನ್ಯ. ಇದರಲ್ಲಿ ಯಾವ ತಪ್ಪೂ ಇಲ್ಲ ಎಂದು ಹೇಳಿದ್ದಾರೆ. 

ಅಂತಿಮವಾಗಿ ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬುದರ ಕುರಿತು ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಅವರು ತೆಗೆದುಕೊಳ್ಳಲಿದ್ದಾರೆಂದು ತಿಳಿಸಿದ್ದಾರೆ. 

ಈಗಾಗಲೇ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಸಂಬಂಧಿಸಿದ್ದಾಗಿದ್ದು, ನಿನ್ನೆಯಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿ ವಾಪಸ್ಸಾಗಿದ್ದಾರೆ. ಭೇಟಿ ವೇಳೆ ಹೈಕಮಾಂಡ್ ನಿಂದ ಯಾವುದೇ ಹಸಿರು ನಿಶಾನೆಗಳು ದೊರೆತಿಲ್ಲ ಎಂದು ಹೇಳಲಾಗುತ್ತಿದೆ. ಈ ನಡುವೆ ಸಚಿವ ಜಾರಕಿಹೊಳಿ ಕೂಡ ಕೇಂದ್ರೀಯ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದು, ಜಾರಕಿಹೊಳಿಯವರ ಆಗ್ರಹಗಳನ್ನು ಹೈಕಮಾಂಡ್ ಈಡೇರಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

SCROLL FOR NEXT