ಸಂಗ್ರಹ ಚಿತ್ರ 
ರಾಜಕೀಯ

ಆರ್.ಆರ್. ನಗರ, ಶಿರಾದಲ್ಲಿ ಹೀನಾಯ ಸೋಲು: ಮುಂಬರುವ ಉಪಚುನಾವಣೆ ಮೇಲೆ ಕಾಂಗ್ರೆಸ್ ಕಣ್ಣು

ಮುಂಬರುವ ಬಸವಕಲ್ಯಾಣ, ಮಸ್ಕಿ ಉಪ ಚುನಾವಣೆಗಳನ್ನು ಗಮನದಲ್ಲಿರಿಸಿಕೊಂಡು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಲಾಯಿತು.

ಬೆಂಗಳೂರು: ಮುಂಬರುವ ಬಸವಕಲ್ಯಾಣ, ಮಸ್ಕಿ ಉಪ ಚುನಾವಣೆಗಳನ್ನು ಗಮನದಲ್ಲಿರಿಸಿಕೊಂಡು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಲಾಯಿತು.

ಇತ್ತೀಚೆಗೆ ನಡೆದ ಶಿರಾ ಮತ್ತು ಆರ್ ಆರ್ ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಹಲವು ಕಾಂಗ್ರೆಸ್ ನಾಯಕರು ಮುಂಬರುವ ಉಪ ಚುನಾವಣೆಗಳ ಬಗ್ಗೆ ಚರ್ಚಿಸಿದರು. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾಂಗ್ರೆಸ್ ನ ಪ್ರಾಬಲ್ಯವಿರುವ ಮಸ್ಕಿ ಮತ್ತು ಬಸವಕಲ್ಯಾಣದಲ್ಲಿ ಮತ್ತೆ ಸೀಟು ವಾಪಸ್ ಪಡೆಯಲು ಪಕ್ಷದ ಮೇಲೆ ಒತ್ತಡವಿದೆ. ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿದರು. ಇನ್ನೂ ಶಾಸಕ ನಾರಾಯಣರಾವ್ ಅವರ ನಿಧನದಿಂದ ಬಸವ ಕಲ್ಯಾಣ ಕ್ಷೇತ್ರ ತೆರವಾಗಿದ್ದು,  ಈ ಎರಡು ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್ ಗೆಲುವು ಸಾಧಿಸಲಿದೆಯೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಈಗಾಗಲೇ ಬಸವಕಲ್ಯಾಣ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಮುಂದಿನ ವಾರ ಮಸ್ಕಿ ಗೆ ತೆರಳುವ ಸಾಧ್ಯತೆಯಿದೆ, ಶನಿವಾರ ಎಂಬಿ ಪಾಟೀಲ್ ಕಾಂಗ್ರೆಸ್ ನಾಯಕರ ಸಭೆ ಕರೆದು ಚರ್ಚಿಸಿದ್ದಾರೆ.

ಭಾನುವಾರ ಮಸ್ಕಿ ಮತ್ತು ಬಸವ ಕಲ್ಯಾಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ನೀಡಲಿದ್ದಾರೆ. ಎರಡು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆ ಕೆಲ ಸಮಸ್ಯೆಗಳಿವೆ, ಸುಮಾರು 50ರಿಂದ 60 ಸಾವಿರ ಲಿಂಗಾಯತರಿದ್ದು, ಈ ಸಮುದಾಯದ ಮತಗಳು ಕಾಂಗ್ರೆಸ್ ಗೆ ಬರಲಿದೆಯೇ ಇಲ್ಲವೇ ಎಂಬ ಆತಂಕ ಕಾಡುತ್ತಿದೆ.

ರಾಜ್ಯದ 2 ಕ್ಷೇತ್ರಗಳ ಉಪಚುನಾವಣೆ ಸೇರಿದಂತೆ ಇತ್ತೀಚೆಗೆ ದೇಶಾದ್ಯಂತ ನಡೆದ ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದ್ದು ಪಕ್ಷದ ಲೆಕ್ಕಾಚಾರ ತಲೆಕೆಳಗಾಗಿದೆ,  ಜೊತೆಗೆ ಬೆಳಗಾವಿ ಕ್ಷೇತ್ರವೂ ಬಿಜೆಪಿ ಪಾಲಾಗಲಿದೆಯೇ ಎಂಬ ಅನುಮಾನವೂ ಕಾಡುತ್ತಿದೆ.

ಶಿರಾ ಮತ್ತು ಆರ್ ಆರ್ ನಗರ ಸೋಲಿನ ಬಗ್ಗೆ ಕಾಂಗ್ರೆಸ್ ನಾಯಕರು ಆತ್ಮಾವಲೋಕನ ಮಾಡಿದ್ದಾರೆ. ಬಿಜೆಪಿ ಪ್ರಾಬಲ್ಯ ಹೆಚ್ಚುತ್ತಿದ್ದು, ಯಾವುದೇ ಹೋರಾಟವಿಲ್ಲದೇ ಕ್ಷೇತ್ರವನ್ನು ಬಿಟ್ಟುಕೊಡಲು ಕಾಂಗ್ರೆಸ್ ಗೂ ಇಷ್ಟವಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT