ಅಖಂಡ ಶ್ರೀನಿವಾಸ ಮೂರ್ತಿ 
ರಾಜಕೀಯ

ಡಿ.ಕೆ.ಶಿವಕುಮಾರ್ ಮೇಲೆ ಅಸಮಾಧಾನ: ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಪತ್ರ ಬರೆಯಲು ಅಖಂಡ ಶ್ರೀನಿವಾಸ ಮೂರ್ತಿ ನಿರ್ಧಾರ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ತಮಗೆ ಯಾವುದೇ ಬೆಂಬಲ ಸಿಗುತ್ತಿಲ್ಲ ಎಂದು ಆರೋಪಿಸಿ ಮುಂದಿನ ವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯಲು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಆಲೋಚಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಭುಗಿಲೇಳುವ ಲಕ್ಷಣ ಕಾಣುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ತಮಗೆ ಯಾವುದೇ ಬೆಂಬಲ ಸಿಗುತ್ತಿಲ್ಲ ಎಂದು ಆರೋಪಿಸಿ ಮುಂದಿನ ವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯಲು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಆಲೋಚಿಸಿದ್ದಾರೆ ಎಂದು ತಿಳಿದುಬಂದಿದೆ.

ತಮ್ಮ ಮನೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ತಮ್ಮನ್ನು ಬೆಂಬಲಿಸುವ ಬದಲು ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಡಿ ಕೆ ಶಿವಕುಮಾರ್ ಬೆಂಬಲಿಸುತ್ತಿದ್ದಾರೆ ಎಂದು ಶ್ರೀನಿವಾಸ ಮೂರ್ತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ಶಿವಕುಮಾರ್ ತಮಗೆ ಬೆಂಬಲ ವ್ಯಕ್ತಪಡಿಸದಿರುವ ಬಗ್ಗೆ ತೀವ್ರ ಬೇಸರವಿದೆ. ತಮ್ಮ ಬಗ್ಗೆ ಅವರು ಯಾವುದೇ ಕನಿಕರದ, ಸಹಾನುಭೂತಿಯ ಮಾತುಗಳನ್ನಾಡಿಲ್ಲ. ಡಿ ಜೆ ಹಳ್ಳಿ ಬೆಂಕಿ ಗಲಭೆ ಪ್ರಕರಣ ನಡೆದು ಮೂರು ತಿಂಗಳುಗಳೇ ಕಳೆದವು. ಸಂಪತ್ ರಾಜ್ ಅವರ ಬಂಧನವಾದ ಮೇಲೆ ಕೂಡ ಅವರಿಗೇ ಶಿವಕುಮಾರ್ ಬೆಂಬಲ ಸೂಚಿಸಿದಂತೆ ಕಂಡುಬಂತು. ಕಳೆದ ತಿಂಗಳು ಸಿಸಿಬಿ ಸಂಪತ್ ರಾಜ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿದಾಗ ನಾನು ಶಿವಕುಮಾರ್ ಅವರಿಗೆ ಪತ್ರ ಬರೆದು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಕೇಳಿಕೊಂಡಿದ್ದೆ. ಆದರೆ ಅವರು ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದಿದ್ದಾರೆ.

ಆದರೆ ತಮಗೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಜಮೀರ್ ಅಹ್ಮದ್ ಖಾನ್ ಅವರ ಬೆಂಬಲವಿದೆ. ನನಗೆ ಕೆಪಿಸಿಸಿ ಅಧ್ಯಕ್ಷರಿಂದ ಯಾವುದೇ ಬೆಂಬಲ ಸಿಗದಿದ್ದರೆ ಎಐಸಿಸಿ ಅಧ್ಯಕ್ಷೆಯವರ ಮನೆಬಾಗಿಲನ್ನು ನ್ಯಾಯಕ್ಕಾಗಿ ಕೋರಬೇಕಾಗುತ್ತದೆ ಎಂದು ಅಖಂಡ ಶ್ರೀನಿವಾಸ ಮೂರ್ತಿ ತಮ್ಮ ಅಸಮಾಧಾನ, ಅಸಹನೆ ಹೊರಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT