ಅಖಂಡ ಶ್ರೀನಿವಾಸ ಮೂರ್ತಿ 
ರಾಜಕೀಯ

ಡಿ.ಕೆ.ಶಿವಕುಮಾರ್ ಮೇಲೆ ಅಸಮಾಧಾನ: ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಪತ್ರ ಬರೆಯಲು ಅಖಂಡ ಶ್ರೀನಿವಾಸ ಮೂರ್ತಿ ನಿರ್ಧಾರ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ತಮಗೆ ಯಾವುದೇ ಬೆಂಬಲ ಸಿಗುತ್ತಿಲ್ಲ ಎಂದು ಆರೋಪಿಸಿ ಮುಂದಿನ ವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯಲು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಆಲೋಚಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಭುಗಿಲೇಳುವ ಲಕ್ಷಣ ಕಾಣುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ತಮಗೆ ಯಾವುದೇ ಬೆಂಬಲ ಸಿಗುತ್ತಿಲ್ಲ ಎಂದು ಆರೋಪಿಸಿ ಮುಂದಿನ ವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯಲು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಆಲೋಚಿಸಿದ್ದಾರೆ ಎಂದು ತಿಳಿದುಬಂದಿದೆ.

ತಮ್ಮ ಮನೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ತಮ್ಮನ್ನು ಬೆಂಬಲಿಸುವ ಬದಲು ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಡಿ ಕೆ ಶಿವಕುಮಾರ್ ಬೆಂಬಲಿಸುತ್ತಿದ್ದಾರೆ ಎಂದು ಶ್ರೀನಿವಾಸ ಮೂರ್ತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ಶಿವಕುಮಾರ್ ತಮಗೆ ಬೆಂಬಲ ವ್ಯಕ್ತಪಡಿಸದಿರುವ ಬಗ್ಗೆ ತೀವ್ರ ಬೇಸರವಿದೆ. ತಮ್ಮ ಬಗ್ಗೆ ಅವರು ಯಾವುದೇ ಕನಿಕರದ, ಸಹಾನುಭೂತಿಯ ಮಾತುಗಳನ್ನಾಡಿಲ್ಲ. ಡಿ ಜೆ ಹಳ್ಳಿ ಬೆಂಕಿ ಗಲಭೆ ಪ್ರಕರಣ ನಡೆದು ಮೂರು ತಿಂಗಳುಗಳೇ ಕಳೆದವು. ಸಂಪತ್ ರಾಜ್ ಅವರ ಬಂಧನವಾದ ಮೇಲೆ ಕೂಡ ಅವರಿಗೇ ಶಿವಕುಮಾರ್ ಬೆಂಬಲ ಸೂಚಿಸಿದಂತೆ ಕಂಡುಬಂತು. ಕಳೆದ ತಿಂಗಳು ಸಿಸಿಬಿ ಸಂಪತ್ ರಾಜ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿದಾಗ ನಾನು ಶಿವಕುಮಾರ್ ಅವರಿಗೆ ಪತ್ರ ಬರೆದು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಕೇಳಿಕೊಂಡಿದ್ದೆ. ಆದರೆ ಅವರು ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದಿದ್ದಾರೆ.

ಆದರೆ ತಮಗೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಜಮೀರ್ ಅಹ್ಮದ್ ಖಾನ್ ಅವರ ಬೆಂಬಲವಿದೆ. ನನಗೆ ಕೆಪಿಸಿಸಿ ಅಧ್ಯಕ್ಷರಿಂದ ಯಾವುದೇ ಬೆಂಬಲ ಸಿಗದಿದ್ದರೆ ಎಐಸಿಸಿ ಅಧ್ಯಕ್ಷೆಯವರ ಮನೆಬಾಗಿಲನ್ನು ನ್ಯಾಯಕ್ಕಾಗಿ ಕೋರಬೇಕಾಗುತ್ತದೆ ಎಂದು ಅಖಂಡ ಶ್ರೀನಿವಾಸ ಮೂರ್ತಿ ತಮ್ಮ ಅಸಮಾಧಾನ, ಅಸಹನೆ ಹೊರಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT