ನಳಿನ್ ಕುಮಾರ್ ಕಟೀಲ್ 
ರಾಜಕೀಯ

ನವೆಂಬರ್ 27 ರಿಂದ ಎಲ್ಲಾ ಜಿಲ್ಲೆಗಳಲ್ಲೂ ಬಿಜೆಪಿ ಗ್ರಾಮ ಸ್ವರಾಜ್ ಯಾತ್ರೆ

ಮುಂಬರುವ ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ಸ್ವರಾಜ್‌ ಯಾತ್ರೆ ಸಂಘಟಿಸಲು ನಿರ್ಧರಿಸಲಾಗಿದೆ

ಬೆಂಗಳೂರು: ಮುಂಬರುವ ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ಸ್ವರಾಜ್‌ ಯಾತ್ರೆ ಸಂಘಟಿಸಲು ನಿರ್ಧರಿಸಲಾಗಿದೆ.

ನವೆಂಬರ್ 27ರಿಂದ ಡಿ.3ರವರೆಗೆ ಈ ಯಾತ್ರೆ ಸಂಘಟಿಸಲಾಗಿದೆ. ಮೂರರಿಂದ ನಾಲ್ಕು ವಿಧಾನಸಭೆ ಕ್ಷೇತ್ರಗಳನ್ನು ಜತೆಯಾಗಿ ಸೇರಿಸಿ ಪ್ರತಿ ಜಿಲ್ಲೆಯ ಎರಡು ಕಡೆಗಳಲ್ಲಿ ಈ ಯಾತ್ರೆ ನಡೆಯಲಿದೆ. 

ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಕುಟುಂಬ ಮಿಲನ ಕಾರ್ಯಕ್ರಮ ನಡೆಯುತ್ತಿದ್ದು, ರಾಜ್ಯದ ಎಲ್ಲೆಡೆ ಶೇ.60ರಷ್ಟು ಪೂರ್ಣಗೊಂಡಿದೆ. ಪಂಚರತ್ನ ಸದಸ್ಯರ ನೇಮಕ ಪ್ರಕ್ರಿಯೆಯೂ ಶೇ.70ರಷ್ಟು ಪೂರ್ಣಗೊಂಡಿದೆ. ಈ ತಿಂಗಳಾಂತ್ಯಕ್ಕೆ ಶೇ.10ರಷ್ಟು ಗುರಿ ಸಾಧಿಸಲು ನಿರ್ಧರಿಸಿದೆ.

ಆರು ತಂಡಗಳನ್ನು ರಚಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಲಕ್ಷ್ಮಣ ಸವದಿ, ಗೋವಿಂದ್ ಕಾರಜೋಳ, ಮತ್ತು ಕೆಎಸ್ ಈಶ್ವರಪ್ಪ,  ಆರ್ .ಅಶೋಕ, ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ತಂಡ ರಚಿಸಿ 30 ಜಿಲ್ಲೆಗಳಲ್ಲಿ ಪ್ರವಾಸ ನಡೆಯಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಘೋಷಿಸಿದ ಮತ್ತು ಜಾರಿಗೆ ತಂದ ವಿವಿಧ ಯೋಜನೆಗಳು ಮತ್ತು ಯೋಜನೆಗಳನ್ನು ತಂಡಗಳು ಜನರಿಗೆ ವಿವರಿಸಲಿವೆ ಎಂದು ಬಿಜೆಪಿ ವಕ್ತಾರ ರವಿಕುಮಾರ್ ತಿಳಿಸಿದ್ದಾರೆ.

ಮನ್ರೇಗಾ ಯೋಜನೆಯಿಂದ ಜನರಿಗೆ ಎಷ್ಟಪ ಲಾಭವಾಗುತ್ತಿದೆ ಎಂಬ ಬಗ್ಗೆಯೂ ಜನರಿಗೆ ವಿವರಿಸಲಾಗಗುವುದು, ಇದರ ಜೊತೆಗೆ ಕೊರೋನಾ ಸಮಯದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಸಬ್ಸಿಡಿ ಗ್ಯಾಸ್ ಸಂಪರ್ಕ, ಮತ್ತು ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಗಳನ್ನು ಹೈಲೈಟ್ ಮಾಡಲಾಗುವುದು.

ಇನ್ನೊಂದೆಡೆ ಕಾಂಗ್ರೆಸ್ ಗ್ರಾಮೀಣ ಮತದಾರರನ್ನು ತಲುಪಲು ಯತ್ನಿಸುತ್ತಿದೆ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಲು ಮುಂದಾಗಿದೆ, ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರಿಗೆ ಈ ಹೊಣೆ ನೀಡಲಾಗಿದೆ. ಪಂಚಾಯತ್ ಚುನಾವಣೆಗೆ ಜೆಡಿಎಸ್ ಇನ್ನೂ ಕಾರ್ಯಾರಂಭ ಮಾಡಬೇಕಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT