ನಳಿನ್ ಕುಮಾರ್ ಕಟೀಲ್ 
ರಾಜಕೀಯ

ನವೆಂಬರ್ 27 ರಿಂದ ಎಲ್ಲಾ ಜಿಲ್ಲೆಗಳಲ್ಲೂ ಬಿಜೆಪಿ ಗ್ರಾಮ ಸ್ವರಾಜ್ ಯಾತ್ರೆ

ಮುಂಬರುವ ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ಸ್ವರಾಜ್‌ ಯಾತ್ರೆ ಸಂಘಟಿಸಲು ನಿರ್ಧರಿಸಲಾಗಿದೆ

ಬೆಂಗಳೂರು: ಮುಂಬರುವ ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ಸ್ವರಾಜ್‌ ಯಾತ್ರೆ ಸಂಘಟಿಸಲು ನಿರ್ಧರಿಸಲಾಗಿದೆ.

ನವೆಂಬರ್ 27ರಿಂದ ಡಿ.3ರವರೆಗೆ ಈ ಯಾತ್ರೆ ಸಂಘಟಿಸಲಾಗಿದೆ. ಮೂರರಿಂದ ನಾಲ್ಕು ವಿಧಾನಸಭೆ ಕ್ಷೇತ್ರಗಳನ್ನು ಜತೆಯಾಗಿ ಸೇರಿಸಿ ಪ್ರತಿ ಜಿಲ್ಲೆಯ ಎರಡು ಕಡೆಗಳಲ್ಲಿ ಈ ಯಾತ್ರೆ ನಡೆಯಲಿದೆ. 

ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಕುಟುಂಬ ಮಿಲನ ಕಾರ್ಯಕ್ರಮ ನಡೆಯುತ್ತಿದ್ದು, ರಾಜ್ಯದ ಎಲ್ಲೆಡೆ ಶೇ.60ರಷ್ಟು ಪೂರ್ಣಗೊಂಡಿದೆ. ಪಂಚರತ್ನ ಸದಸ್ಯರ ನೇಮಕ ಪ್ರಕ್ರಿಯೆಯೂ ಶೇ.70ರಷ್ಟು ಪೂರ್ಣಗೊಂಡಿದೆ. ಈ ತಿಂಗಳಾಂತ್ಯಕ್ಕೆ ಶೇ.10ರಷ್ಟು ಗುರಿ ಸಾಧಿಸಲು ನಿರ್ಧರಿಸಿದೆ.

ಆರು ತಂಡಗಳನ್ನು ರಚಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಲಕ್ಷ್ಮಣ ಸವದಿ, ಗೋವಿಂದ್ ಕಾರಜೋಳ, ಮತ್ತು ಕೆಎಸ್ ಈಶ್ವರಪ್ಪ,  ಆರ್ .ಅಶೋಕ, ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ತಂಡ ರಚಿಸಿ 30 ಜಿಲ್ಲೆಗಳಲ್ಲಿ ಪ್ರವಾಸ ನಡೆಯಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಘೋಷಿಸಿದ ಮತ್ತು ಜಾರಿಗೆ ತಂದ ವಿವಿಧ ಯೋಜನೆಗಳು ಮತ್ತು ಯೋಜನೆಗಳನ್ನು ತಂಡಗಳು ಜನರಿಗೆ ವಿವರಿಸಲಿವೆ ಎಂದು ಬಿಜೆಪಿ ವಕ್ತಾರ ರವಿಕುಮಾರ್ ತಿಳಿಸಿದ್ದಾರೆ.

ಮನ್ರೇಗಾ ಯೋಜನೆಯಿಂದ ಜನರಿಗೆ ಎಷ್ಟಪ ಲಾಭವಾಗುತ್ತಿದೆ ಎಂಬ ಬಗ್ಗೆಯೂ ಜನರಿಗೆ ವಿವರಿಸಲಾಗಗುವುದು, ಇದರ ಜೊತೆಗೆ ಕೊರೋನಾ ಸಮಯದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಸಬ್ಸಿಡಿ ಗ್ಯಾಸ್ ಸಂಪರ್ಕ, ಮತ್ತು ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಗಳನ್ನು ಹೈಲೈಟ್ ಮಾಡಲಾಗುವುದು.

ಇನ್ನೊಂದೆಡೆ ಕಾಂಗ್ರೆಸ್ ಗ್ರಾಮೀಣ ಮತದಾರರನ್ನು ತಲುಪಲು ಯತ್ನಿಸುತ್ತಿದೆ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಲು ಮುಂದಾಗಿದೆ, ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರಿಗೆ ಈ ಹೊಣೆ ನೀಡಲಾಗಿದೆ. ಪಂಚಾಯತ್ ಚುನಾವಣೆಗೆ ಜೆಡಿಎಸ್ ಇನ್ನೂ ಕಾರ್ಯಾರಂಭ ಮಾಡಬೇಕಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT