ಡಾ. ಕೆ. ನಾರಾಯಣ 
ರಾಜಕೀಯ

ಬಿಜೆಪಿಯ ಡಾ. ಕೆ. ನಾರಾಯಣ್ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ 

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರಾಗಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ  ಡಾ. ಕೆ. ನಾರಾಯಣ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು.

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರಾಗಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ  ಡಾ. ಕೆ. ನಾರಾಯಣ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು.

ಸೋಮವಾರ ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಬೇರೆ ಯಾವ ಪಕ್ಷದ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸದ ಕಾರಣ ಡಾ. ಕೆ. ನಾರಾಯಣ ಅವರು ರಾಜ್ಯಸಭೆ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಉಪ ಚುನಾವಣಾಧಿಕಾರಿ, ರಾಜ್ಯ ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷ್ಮಿ ಅವರು ಅಧಿಕೃತವಾಗಿ ಈ ಕುರಿತು ಘೋಷಣೆ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್‌ ಕುಮಾರ್‌ ಕಟೀಲ್‌ ನವೆಂಬರ್ 18ರಂದು ರಾಜ್ಯಸಭೆ ಉಪ ಚುನಾವಣೆ ಅಭ್ಯರ್ಥಿ ಡಾ. ಕೆ. ನಾರಾಯಣ ಅವರಿಗೆ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ  ಬಿ-ಫಾರಂ ವಿತರಣೆ ಮಾಡಿದ್ದರು. ಅಂದೇ ನಾಮಪತ್ರವನ್ನು ಸಲ್ಲಿಸಲಾಗಿತ್ತು.

ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾದ ಡಾ. ಕೆ. ನಾರಾಯಣ್ ಅವರನ್ನು ಉಪ ಮುಖ್ಯಮಂತ್ರಿ ಡಾ. ಸಿ. ಎನ್.ಅಶ್ವತ್ ನಾರಾಯಣ, ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಸಚಿವ ಡಾ. ಕೆ. ಸುಧಾಕರ್ ಸೇರಿದಂತೆ ಹಲವು ಮುಖಂಡರು ಅಭಿನಂದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT