ಸಂಸದ ಶ್ರೀನಿವಾಸ್ ಪ್ರಸಾದ್ 
ರಾಜಕೀಯ

ಯಡಿಯೂರಪ್ಪ ಅವರಿಗೆ ಅಧಿಕಾರಕ್ಕೆ ಬರುವಾಗ ನಾನು ಬೇಕಿತ್ತು, ಈಗ ಬೇಕಿಲ್ಲ: ಸಂಸದ ಶ್ರೀನಿವಾಸ್ ಪ್ರಸಾದ್

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವಾಗ ನಾನು ಬೇಕಿತ್ತು. ಈಗ ಸಿಎಂ ಆಗುವ ಕೆಲಸ ಮುಗಿತ್ತಲ್ಲ. ಇನ್ನೇನು ಆ ದರ್ದು ಅವರಿಗಿಲ್ಲ. ಈಗ ಆರಾಮಾಗಿ ಇದ್ದಾರೆ. ನೋಡ್ಕೋತೀವಿ ಬಿಡಿ ಎಂದು ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.

ಮೈಸೂರು: ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವಾಗ ನಾನು ಬೇಕಿತ್ತು. ಈಗ ಸಿಎಂ ಆಗುವ ಕೆಲಸ ಮುಗಿತ್ತಲ್ಲ. ಇನ್ನೇನು ಆ ದರ್ದು ಅವರಿಗಿಲ್ಲ. ಈಗ ಆರಾಮಾಗಿ ಇದ್ದಾರೆ. ನೋಡ್ಕೋತೀವಿ ಬಿಡಿ ಎಂದು ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. 

ನಂಜನಗೂಡು ತಾಲೂಕಿನ ಸುತ್ತೂರು ಶ್ರೀಕ್ಷೇತ್ರದಲ್ಲಿ ಬುಧವಾರ ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ವಿಚಾರ ಕುರಿತು ಸುದ್ದಿಗಾರರ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. 

ಮಂತ್ರಿ ಪಟ್ಟವನ್ನು ನಾನೇ ಬೇಡ ಎಂದಿದ್ದೇನೆ. ಚುನಾವಣೆಯನ್ನೇ ಬೇಡ ಎಂದಿದ್ದವನು ನಾನು. ಇನ್ನು ಮಂತ್ರಿ ಪಟ್ಟ ಯಾಕೇ ಬೇಕು ನನಗೆ? ನಾನು ಕೇಂದ್ರದಲ್ಲಿ ಸಚಿವ ಸ್ಥಾನ ಆಕಾಂಕ್ಷಿಯಲ್ಲ. ಹಳೇ ಮೈಸೂರು ಭಾಗಕ್ಕೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಅಳಿಯ ಶಾಸಕ ಹರ್ಷವರ್ಧನ್ ಹೇಳಿಕೆ ವೈಯಕ್ತಿ ಎಂದು ತಿಳಿಸಿದ್ದಾರೆ. 

ಹಳೇ ಮೈಸೂರು ಭಾಗಕ್ಕೆ ಈಗ ಸಾಕಾಗುವಷ್ಟು ಮಂತ್ರಿ ಸ್ಥಾನ ಇದೆ. ಸಿಎಂ ಹಳೇ ಮೈಸೂರು ಭಾಗದವರೇ. ಈಶ್ವರಪ್ಪ ನಾರಾಯಣಗೌಡ, ಎಸ್.ಟಿ.ಸೋಮಶೇಖರ್ ಹಳೇ ಮೈಸೂರಿನವರೇ. ಇನ್ನೆಷ್ಟು ಜನರನ್ನು ಗುಡ್ಡೆ ಹಾಕಿಕೊಳ್ತೀರಾ ಹೇಳಿ ಎಂದು ಪ್ರಶ್ಸಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel