ಗೋಪಾಲಯ್ಯ 
ರಾಜಕೀಯ

ಸಚಿವರುಗಳ ಭಿನ್ನಾಭಿಪ್ರಾಯ ಬಗೆಹರಿಸುವ ಸಾಮರ್ಥ್ಯ ಯಡಿಯೂರಪ್ಪ ಅವರಿಗಿದೆ: ಗೋಪಾಲಯ್ಯ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆದಿಲ್ಲ, ಸಿಎಂ ಯಡಿಯೂರಪ್ಪ ತಮ್ಮ ಅಧಿಕಾರವಧಿಯನ್ನೂ ಪೂರ್ಣಗೊಳಿಸುತ್ತಾರೆ ಎಂದು ಸಚಿವ ಕೆ ಗೋಪಾಲಯ್ಯ ಹೇಳಿದ್ದಾರೆ.

ಹಾಸನ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆದಿಲ್ಲ, ಸಿಎಂ ಯಡಿಯೂರಪ್ಪ ತಮ್ಮ ಅಧಿಕಾರವಧಿಯನ್ನೂ ಪೂರ್ಣಗೊಳಿಸುತ್ತಾರೆ ಎಂದು ಸಚಿವ ಕೆ ಗೋಪಾಲಯ್ಯ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು ಸಚಿವರುಗಳ ಮಧ್ಯೆ ಇರುವ ಭಿನ್ನಾಬಿಪ್ರಾಯ ಮತ್ತು ಅಸಮಾಧಾನವನ್ನು ಬಗೆಹರಿಸುವ ಸಾಮರ್ಥ್ಯ ಯಡಿಯೂರಪ್ಪ ಅವರಿಗಿದೆ, ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಹೈಕಮಾಂಡ್ ಆದೇಶದಂತೆ ನಡೆಯಲಿದೆ, ಹೊಸಬರು, ಹಳಬರು ಎಂಬ ಬೇಧಭಾವವಿಲ್ಲ,  ಎಲ್ಲರಿಗೂ ಒಂದೇ ರೀತಿಯ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ಇನ್ನೂ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಇಲಾಖೆಯ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲು ತೆರಳಿದ್ದಾರೆ ಎಂದು ಗೋಪಾಲಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT