ರಾಜಕೀಯ

'ಸಿದ್ದರಾಮಯ್ಯ ಅವರಿಗೆ ಬುದ್ದಿವಂತಿಕೆ ಇರಲಿಲ್ಲ, ಅವರು ಮಾಡಿದ ತಪ್ಪನ್ನು ನೀವು ಮಾಡಬೇಡಿ'

Shilpa D

ಮೈಸೂರು: ಅಧಿಕಾರ ಕೆಲವೊಮ್ಮೆ ಎಲ್ಲರನ್ನೂ ಬದಲಾವಣೆ ಮಾಡಿಸಿಬಿಡುತ್ತದೆ. ಸಿಎಂ ಯಡಿಯೂರಪ್ಪ ಹಿಂದಿಗಿಂತ ಬದಲಾಗಿದ್ದಾರೆ ಎಂದು ಹೇಳೋಕೆ ಆಗುವುದಿಲ್ಲ. ಹಾಗಂತ ಅವರು ಬದಲಾಗಿಲ್ಲ  ಎಂದು ಹೇಳುವುದಕ್ಕಾಗುವುದಿಲ್ಲ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮತ್ತೊಮ್ಮೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಶ್ರೀನಿವಾಸ್ ಪ್ರಸಾದ್,  ಸಿಎಂ ಆಗಿ ಅಧಿಕಾರ ನಡೆಸುವುದು ಬಹಳ ಕಠಿಣ ಕೆಲಸ. ನಿಗಮ ಮಂಡಳಿ ಆಯ್ಕೆ ವಿಚಾರ‌ದಲ್ಲಿ ನನಗೆ ಅತೃಪ್ತಿ ಇದೆ. ಇನ್ನೂ ಉತ್ತಮವಾಗಿ ಅಧ್ಯಕ್ಷರ ನೇಮಕಾತಿ ಮಾಡಬಹುದಿತ್ತು. ಎಲ್ಲರ ಸಲಹೆ ಪಡೆದು ಮಾಡಬಹುದಿತ್ತು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನವರಿಗೆ ಬುದ್ದಿವಂತಿಕೆ ಇರಲಿಲ್ಲ. ಸಿಎಂ ಯಡಿಯೂರಪ್ಪನವರಿಗೆ ಅದನ್ನೇ ಹೇಳುತ್ತಿದ್ದೇನೆ. ಸಿದ್ದರಾಮಯ್ಯ ಮಾಡಿದ ತಪ್ಪನ್ನು ನೀವು ಮಾಡಬೇಡಿ, ಸ್ವಲ್ಪ ಬುದ್ದಿವಂತಿಕೆಯಿಂದ ತೀರ್ಮಾನ ತಗೊಳ್ಳಿ ಎಂದು ಯಡಿಯೂರಪ್ಪನವರಿಗೆ ಹೇಳುತ್ತಿದ್ದೇನೆ ಎಂದ ಅವರು ನಾಯಕತ್ವ ಬದಲಾವಣೆ ಸಂಬಂಧ ಪ್ರತಿಕ್ರಿಯಿಸಲು ನಿರಾಕರಿಸಿದರು. 

ಉಪ ಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಬಂದಿದೆ. ಇದಕ್ಕಾಗಿ ಹೀಗ್ಗಿ ಹೀರೇಕಾಯಿ ಆಗಬೇಕಿಲ್ಲ. ವಿಪಕ್ಷಗಳು ಕುಸಿದು ಹೋಗಿವೆ ಎಂದು ತಿಳಿಸಿದ್ದಾರೆ.

SCROLL FOR NEXT