ಸಿ.ಪಿ ಯೋಗೇಶ್ವರ್ 
ರಾಜಕೀಯ

ಬಿಜೆಪಿ ಸರ್ಕಾರ ರಚಿಸಲು ಯೋಗೇಶ್ವರ್ ಕೂಡ ಕಾರಣ, ಅವರಿಗೂ ಸಚಿವ ಸ್ಥಾನ ಸಿಗಬೇಕು: ಅಶ್ವತ್ಥ ನಾರಾಯಣ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಸಿಪಿ ಯೋಗೇಶ್ವರ್ ಕಾರಣರಾಗಿದ್ದು, ಅವರು ಹಲವು ಮಹತ್ವದ ಜವಾಬ್ದಾರಿ ವಹಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಸಿಪಿ ಯೋಗೇಶ್ವರ್ ಕಾರಣರಾಗಿದ್ದು, ಅವರು ಹಲವು ಮಹತ್ವದ ಜವಾಬ್ದಾರಿ ವಹಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಉಡುಪಿಯಲ್ಲಿ  ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಹಳ ಜಟಿಲ ವಿಚಾರವಾಗಿದ್ದು, ವರಿಷ್ಠರು ಹಾಗೂ ಮುಖ್ಯಮಂತ್ರಿ ಸಮಾಲೋಚಿಸಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ನಿರ್ಧರಿಸಲಿದ್ದಾರೆ. ಯೋಗೀಶ್ವರ್‌ಗೆ ಹಿಂದೆ ಜವಾಬ್ದಾರಿ ಹೊತ್ತು‌ ಕಾರ್ಯ ನಿರ್ವಹಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬದು ವೈಯಕ್ತಿಕ ಅಭಿಪ್ರಾಯ ಎಂದರು. 

ಪಕ್ಷದಲ್ಲಿ ಮೂಲ ಬಿಜೆಪಿಗರು, ವಲಸಿಗರು ಎಂಬ ತಾರತಮ್ಯ ಇಲ್ಲ. ವಲಸೆ ಬಂದವರೂ ಸರ್ಕಾರ ರಚನೆಗೆ ಕಾರಣರಾಗಿದ್ದು, ಕುಟುಂಬದ ರೀತಿ‌ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುತ್ತೇವೆ‌. ಯಾರಿಗೆ ಏನು ಸಲ್ಲಬೇಕು, ಅದು ಪಕ್ಷದಿಂದ ಸಿಗಲಿದೆ ಎಂದರು. ಇನ್ನೂ ಸಚಿವ ಸಂಪುಟ ವಿಸ್ತರಣೆಯಲ್ಲಿ ಅಸಮತೋಲನ ಇರುವುದಿಲ್ಲ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT